Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:19 - ಕನ್ನಡ ಸತ್ಯವೇದವು J.V. (BSI)

19 ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಧರ್ಮನಿರತನಿಗೆ ದೊರಕುವುದು ಜೀವ; ಅಧರ್ಮಾಸಕ್ತನಿಗೆ ಸಿಗುವುದು ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀತಿವಂತನು ನಿಜವಾಗಿಯೂ ಜೀವವನ್ನು ಹೊಂದಿಕೊಳ್ಳುವನು, ಆದರೆ ಕೆಡುಕನನ್ನು ಹಿಂಬಾಲಿಸುತ್ತಾ ಹೋಗುವವನು ಸಾವಿಗೀಡಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ, ಕೆಟ್ಟದ್ದನ್ನು ಬೆನ್ನಟ್ಟುವವನು ತನ್ನ ಮರಣವನ್ನು ಬೆನ್ನಟ್ಟುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:19
18 ತಿಳಿವುಗಳ ಹೋಲಿಕೆ  

ಶಿಷ್ಟನ ದುಡಿತ ಜೀವಾಸ್ಪದ; ದುಷ್ಟನ ಆದಾಯ ಪಾಪಾಸ್ಪದ.


ಯೆಹೋವನ ಭಯವು ಜೀವದಾಯಕವು; [ಭಯಭಕ್ತಿಯುಳ್ಳವನು] ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸದು.


ಧರ್ಮಮಾರ್ಗದಿಂದ ಜೀವಲಾಭವು; ಆ ಸುಪಥಮಾರ್ಗವು ಅಮರಣವೇ.


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.


ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ.


ಪ್ರಿಯರಾದ ಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವದಕ್ಕೆ ಯಾರಿಗೂ ಅವಕಾಶ ಕೊಡಬೇಡಿರಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.


ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಧನವು ಕೋಪದ ದಿನದಲ್ಲಿ ವ್ಯರ್ಥ; ಧರ್ಮವು ಮರಣವಿಮೋಚಕ.


ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ.


ಜ್ಞಾನಮಾರ್ಗದಿಂದ ತಪ್ಪಿದವನಿಗೆ ಪ್ರೇತ ಸಮೂಹವೇ ವಿಶ್ರಾಂತಿಸ್ಥಾನ.


ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.


ಅಹಜ್ಯನು ತಾನು ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.


ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರಮಾಡುವದಕ್ಕೆ ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ನೀತಿ ಕೃಪೆಗಳನ್ನು ಹುಡುಕುವವನು ನೀತಿ ಜೀವಕೀರ್ತಿಗಳನ್ನು ಪಡೆಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು