Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:28 - ಕನ್ನಡ ಸತ್ಯವೇದವು J.V. (BSI)

28 ಧನವನ್ನೇ ನಂಬಿದವನು ಬಿದ್ದು ಹೋಗುವನು; ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದ್ರವ್ಯವನ್ನು ನಂಬಿದವನು ಉದುರಿಹೋಗುವನು; ದೈವಭಕ್ತನು ಕುಡಿಯಂತೆ ಚಿಗುರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಐಶ್ವರ್ಯದ ಮೇಲೆ ಭರವಸೆಯಿಟ್ಟಿರುವವನು ಎಲೆಯಂತೆ ಉದುರಿಹೋಗುವನು. ಆದರೆ ಸಧರ್ಮಿಯು ಚಿಗುರಿದ ಎಲೆಯಂತೆ ಬೆಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ತನ್ನ ಐಶ್ವರ್ಯದಲ್ಲಿ ಭರವಸೆ ಇಡುವವನು ಬಿದ್ದುಹೋಗುವನು, ಆದರೆ ನೀತಿವಂತರು ಹಸಿರೆಲೆಯ ಹಾಗೆ ಚಿಗುರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:28
13 ತಿಳಿವುಗಳ ಹೋಲಿಕೆ  

ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ ದಗೆಗೆ ಭಯಪಡದೆ ಹಸುರೆಲೆಯನ್ನು ಬಿಡುತ್ತಾ ಕ್ಷಾಮ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಸೊಕ್ಕಿರಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ; ಬಡವನಿಗೆ ಬಡತನವು ಅಳಿವು.


ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಉಬ್ಬಿದ್ದಾರೆ.


ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು