Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:8 - ಕನ್ನಡ ಸತ್ಯವೇದವು J.V. (BSI)

8 ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು; ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬುದ್ಧಿವಂತನನ್ನು ಅವರ ಬುದ್ಧಿಗೆ ತಕ್ಕಂತೆ ಜನ ಹೊಗಳುವರು; ವಕ್ರಬುದ್ಧಿಯುಳ್ಳವನನ್ನಾದರೊ ಅವರು ತೆಗಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರು ಜ್ಞಾನಿಗಳನ್ನು ಹೊಗಳುವರು; ಮೂಢನನ್ನು ಕಡೆಗಣಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತನ್ನ ಜ್ಞಾನಕ್ಕನುಸಾರವಾಗಿ ಮನುಷ್ಯನು ಗೌರವ ಹೊಂದುವನು; ವಕ್ರಹೃದಯವುಳ್ಳವನು ಕಡೆಗಣಿಸಲಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:8
24 ತಿಳಿವುಗಳ ಹೋಲಿಕೆ  

ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಆ ಘನವನ್ನು ಅವನು ದೇವರಿಗೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕಂದರೆ ಲೌಕಿಕರು ತಮ್ಮಂಥವರ ವಿಷಯದಲ್ಲಿ ಬೆಳಕಿನ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ.


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಸದುಪದೇಶದ ಕೊರತೆಯಿಂದಲೇ ಸಾಯುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.


ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು; ಜ್ಞಾನಹೀನರಿಗಾಗುವ ಬಹುಮಾನವೋ ಅವಮಾನವೇ.


ಆದಕಾರಣ ಬಿರುಗಾಳಿಯಂತೆ ಅಪಾಯವೂ ತುಫಾನಿನಂತೆ ಆಪತ್ತೂ ಬಂದು ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ


ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವದು.


ಈತನಿಗಿಂತ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೇ ಎಂದು ಹೇಳಿ ಯೋಸೇಫನಿಗೆ - ದೇವರು ಇದನ್ನೆಲ್ಲಾ ನಿನಗೇ ತಿಳಿಸಿರುವದರಿಂದ ನಿನಗೆ ಸಮಾನನಾದ ಬುದ್ಧಿ ವಿವೇಕಗಳುಳ್ಳ ಪುರುಷನು ಯಾವನೂ ಇಲ್ಲ;


ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮೂರ್ಖನಾದ ಅವನೊಡನೆ ಮಾತಾಡುವದಸಾಧ್ಯ ಎಂದು ಹೇಳಿದನು.


ಫಿಲಿಷ್ಟಿಯಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅಧಿಕಜಯಶೀಲನಾಗಿ ಬರುತ್ತಿದ್ದದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.


ಸೇವಕರಲ್ಲೊಬ್ಬನು ಅವನಿಗೆ - ಬೇತ್ಲೆಹೇವಿುನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲವನೂ ಪರಾಕ್ರಮಶಾಲಿಯೂ ರಣಶೂರನೂ ವಾಕ್ಚತುರನೂ ಸುಂದರನೂ ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆಂದು ತಿಳಿಸಿದನು.


ಆಗ ಸಮುವೇಲನು - ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.


ಜ್ಞಾನಿಯ ಹಾಗಿರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವದು.


ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು; ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವದು.


ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯು ಲೇಸು.


ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು; ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.


ಯೆಹೋವನು ಅದರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಿಸಿದ್ದಾನೆ; ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು