Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:20 - ಕನ್ನಡ ಸತ್ಯವೇದವು J.V. (BSI)

20 ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:20
27 ತಿಳಿವುಗಳ ಹೋಲಿಕೆ  

ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು ಜ್ಞಾನಿಗಳ ನಡುವೆ ನೆಲೆಗೊಳ್ಳುವನು.


ಮೂಢರೇ, [ಮೂಢತ್ವವನ್ನು] ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ ಎಂದು ಪ್ರಬೋಧಿಸುತ್ತಾಳೆ.


ಪರಲೋಕದಿಂದ ಬಂದ ಮತ್ತೊಂದು ಶಬ್ದವನ್ನು ಕೇಳಿದೆನು; ಅದು ಹೇಳಿದ್ದೇನಂದರೆ - ನನ್ನ ಪ್ರಜೆಗಳೇ, ಅವಳನ್ನು ಬಿಟ್ಟುಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿಯಾಗಬಾರದು.


ನಿನ್ನ ನೇಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.


ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಪ್ರೇರೇಪಿಸೋಣ.


ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ಇವರು ಅಪೊಸ್ತಲರ ಬೋಧನೆಯನ್ನು ಕೇಳುವದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದು ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರಿಸಿ -


ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದು ಹೋಗುತ್ತದೆ.


ಅವರು ಅವನಿಗೆ - ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು - ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.


ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಸೊದೋವಿುನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.


ಯೆಹೋಷಾಫಾಟನನ್ನು - ಯುದ್ಧಮಾಡುವದಕ್ಕಾಗಿ ನೀನೂ ನಮ್ಮ ಜೊತೆಯಲ್ಲಿ ರಾಮೋತ್‍ಗಿಲ್ಯಾದಿಗೆ ಬರುತ್ತೀಯೋ ಎಂದು ಕೇಳಲು ಅವನು - ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇಯಲ್ಲವೋ ಎಂದು ಉತ್ತರಕೊಟ್ಟು


ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲ್ಯರ ಅರಸನೆಂದು ನೆನಸಿ ಅವನಿಗೆ ವಿರೋಧವಾಗಿ ಯುದ್ಧಮಾಡ ಬಂದರು.


ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡಲೇ ಬೆಳೆದು ತನಗೆ ಮಂತ್ರಿಗಳೂ ಆದ ಯೌವನಸ್ಥರನ್ನು ಕರಿಸಿ -


ಇವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ ಇವನಿಗೆ ಸಲಹೆಕೊಟ್ಟು ಇವನನ್ನು ಕೆಡಿಸುತ್ತಾ ಬಂದದರಿಂದ ಇವನು ಯೆಹೋವನಿಗೆ ವಿರುದ್ಧವಾಗಿ ನಡೆದನು.


ಇಷ್ಟಸಿದ್ಧಿ ಮನಸ್ಸಿಗೆ ಸಿಹಿ; ಕೆಟ್ಟದ್ದನ್ನು ಬಿಡುವದು ಮೂಢರಿಗೆ ಕಹಿ.


ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳುವಳಿಕೆಯನ್ನೂ ಕಾಣಲಾರೆ.


ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ; ಸಿಟ್ಟುಗಾರನ ಸಹವಾಸ ಮಾಡಬೇಡ.


ಮಾಡಿದರೆ ಅವನ ದುರ್ನಡತೆಯನ್ನನುಸರಿಸಿ ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು