Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:23 - ಕನ್ನಡ ಸತ್ಯವೇದವು J.V. (BSI)

23 ಬಡವರಿಗೆ ಬಂಜರು ಭೂವಿುಯೂ ಬಹು ಬೆಳೆಯನ್ನೀಯುವದು; ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಬಡವರಿಗೆ ಬಂಜರುಭೂಮಿಯೂ ಬೆಳೆಯನ್ನೀಯುವುದುಂಟು; ಭಂಡತನ ಇರುವಲ್ಲಿ ಅದು ಕೂಡ ಹಾಳಾಗುವುದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಡವನ ಭೂಮಿಯು ಯಥೇಚ್ಛವಾಗಿ ಫಲಿಸಬಹುದು. ಆದರೆ ಅನ್ಯಾಯವು ಅದನ್ನು ಕೊಚ್ಚಿಕೊಂಡು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ; ಅನ್ಯಾಯವು ಅದನ್ನು ಹಾರಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:23
12 ತಿಳಿವುಗಳ ಹೋಲಿಕೆ  

ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು; ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.


ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ; ವ್ಯರ್ಥಕಾರ್ಯಾಸಕ್ತನಿಗೆ ಹೊಟ್ಟೆ ತುಂಬಾ ಬಡತನ.


ಭೂವಿುಯಿಂದ ಸರ್ವಕ್ಕೂ ಲಾಭವಿದೆ. ಹೊಲಗದ್ದೆಗಳಿಂದ ರಾಜನಿಗೂ ಸೇವೆಯಾಗುತ್ತದೆ.


ದಯಾಳುವಾಗಿ ಧನಸಹಾಯಮಾಡುವವನೂ ತನ್ನ ಕಾರ್ಯಗಳನ್ನು ನೀತಿಯಿಂದ ನಡಿಸುವವನೂ ಭಾಗ್ಯವಂತನು.


ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಯಜಮಾನನ ಮಾತಿಗೆ ಕಾಯುವವನು ಮಾನವನ್ನನುಭವಿಸುವನು.


ಬಾಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನನುಭವಿಸುವನು; ಅವನ ಕೈಕೆಲಸದ ಫಲವು ಅವನಿಗೇ ಪ್ರಾಪ್ತವಾಗುವದು.


ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ಹೋಗಿ ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು