Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:4 - ಕನ್ನಡ ಸತ್ಯವೇದವು J.V. (BSI)

4 ಸೋಮಾರಿಯ ಆಶೆಯು ವ್ಯರ್ಥ; ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೋಮಾರಿಗೆ ಹಸಿದಿದ್ದರೂ ಊಟವಿಲ್ಲ; ಶ್ರಮಜೀವಿಗಳಿಗಾದರೋ ಬಲಿಷ್ಠರನ್ನಾಗಿಸುವ ಮೃಷ್ಟಾನ್ನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೋಮಾರಿಯ ಆಸೆಗಳೆಲ್ಲಾ ವ್ಯರ್ಥ. ಅವನೆಂದಿಗೂ ಅವುಗಳನ್ನು ಪಡೆಯಲಾರ. ಕಷ್ಟಪಟ್ಟು ದುಡಿಯುವವನು ತನ್ನ ಆಸೆಗಳನ್ನು ಈಡೇರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:4
26 ತಿಳಿವುಗಳ ಹೋಲಿಕೆ  

ಚುರುಕುಗೈಯವನಿಗೆ ರಾಜ್ಯಾಧಿಕಾರ; ಮೈಗಳ್ಳನಿಗೆ ಬಿಟ್ಟಿಯ ಬದುಕು.


ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು; ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.


ಜೋಲುಗೈ ದಾರಿದ್ರ್ಯ; ಚುರುಕುಗೈ ಐಶ್ವರ್ಯ.


ಉದಾರಿಯು ಪುಷ್ಟನಾಗುವನು; ನೀರು ಹಾಯಿಸುವವನಿಗೆ ನೀರು ಸಿಕ್ಕುವದು.


ಆಸೆಬಡುಕನು ಜಗಳವನ್ನೆಬ್ಬಿಸುವನು; ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.


ನೀವು ಉಪಚಾರಮಾಡುವದರಲ್ಲಿ ಯಾವ ಆಸಕ್ತಿಯನ್ನು ತೋರಿಸಿದ್ದೀರೋ ನಿಮ್ಮ ನಿರೀಕ್ಷೆ ದೃಢಮಾಡಿಕೊಂಡು ಕಡೇ ತನಕ ಹಿಡಿಯುವದರಲ್ಲಿಯೂ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ಅಪೇಕ್ಷಿಸುತ್ತೇವೆ.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಲಿನ ನಿಲವುಗಳ ಹತ್ತಿರ ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ ಎಂಬದು ಸೋಮಾರಿಯ ನೆವ.


ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.


ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವದಕ್ಕೆ ಯಾರಿಂದಾದೀತು; ಇಸ್ರಾಯೇಲ್ಯರ ಕಾಲ್ಭಾಗವನ್ನಾದರೂ ಯಾರು ಹೇಳಬಲ್ಲರು. ಸಜ್ಜನರಾದ ಅವರು ಸಾಯುವ ರೀತಿಯಲ್ಲೇ ನಾನೂ ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು ಅಂದನು.


ಸೋಮಾರಿಯೇ, ಇರುವೆಯ ಹತ್ತಿರ ಹೋಗಿ ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ತಂದುಕೋ.


ಮೈಗಳ್ಳನು ಹಿಡಿದ ಬೇಟೆಯನ್ನೂ ಬೇಯಿಸನು; ಚಟುವಟಿಕೆಯವನಿಗೆ ಅಮೂಲ್ಯಸಂಪತ್ತು ದೊರಕುವದು.


ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.


ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಮಾಡಲೊಲ್ಲನು; ದುಷ್ಟನ ನಡತೆಯು ಹೇಸಿಕೆಗೂ ನಾಚಿಕೆಗೂ ಆಸ್ಪದ.


ಮೈಗಳ್ಳನು ಮಳೆಗಾಲದಲ್ಲಿ ಹೊಲಗೇಯನು; ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?


ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ; ಆತುರಪಡುವವರಿಗೆಲ್ಲಾ ಕೊರತೆಯೇ.


ಸೋಮಾರಿಯ ಆಶೆಯು ಅವನನ್ನು ಕೊಲ್ಲುವದು, ಅವನ ಕೈಗಳು ದುಡಿಯಲೊಲ್ಲವಷ್ಟೆ.


ಅದೇ ದಿನದಲ್ಲಿ ಇಸಾಕನ ಸೇವಕರು ಬಂದು - ನಮಗೆ ನೀರು ಸಿಕ್ಕಿತು ಎಂದು ಹೇಳಿ ತಾವು ತೋಡಿದ್ದ ಬಾವಿಯ ಸಂಗತಿಯನ್ನು ತಿಳಿಸಲು


ಹಿಂದಿರುಗಿ ಬಂದು ಯೆಹೋಶುವನಿಗೆ - ಎಲ್ಲಾ ಜನರು ಹೋಗುವದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರು ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವದೇಕೆ? ಅವರು ಸ್ವಲ್ಪ ಮಂದಿ ಮಾತ್ರ ಇರುತ್ತಾರೆ ಎಂದು ಹೇಳಿದರು.


ಸೋಮಾರಿಯ ಹೊಲದ ಮೇಲೆಯೂ ಬುದ್ಧಿಹೀನನ ತೋಟದ ಮೇಲೆಯೂ ಹಾದು ಹೋದೆನು.


ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು; ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.


ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ? [ಎಂದು ನಾನು ಅಂದುಕೊಂಡಾಗ]


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು