Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:7 - ಕನ್ನಡ ಸತ್ಯವೇದವು J.V. (BSI)

7 ಒಬ್ಬನು ಧನವನ್ನು ಸಂಗ್ರಹಿಸಿದರೂ ಏನೂ ಇಲ್ಲದ ದರಿದ್ರನೇ; ಮತ್ತೊಬ್ಬನು ಧನವನ್ನೆಲ್ಲಾ ವ್ಯಯಮಾಡಿ ಬಡವನಾದರೂ ಬಹು ಐಶ್ವರ್ಯವಂತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಒಬ್ಬ ಹಣಕೂಡಿಸಿದ್ದರೂ ಘನದರಿದ್ರನಿರಬಹುದು; ಮತ್ತೊಬ್ಬ ಹಣವೆಚ್ಚಮಾಡಿ ಕಡುಬಡವನಾಗಿದ್ದರೂ ಐಶ್ವರ್ಯವಂತನಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೆಲವರು ಐಶ್ವರ್ಯವಂತರಂತೆ ನಟಿಸುತ್ತಾರೆ, ಆದರೆ ಅವರಲ್ಲೇನೂ ಇರುವುದಿಲ್ಲ. ಕೆಲವರು ಬಡವರಂತೆ ವರ್ತಿಸುತ್ತಾರೆ. ಆದರೆ ಅವರು ನಿಜವಾಗಿಯೂ ಐಶ್ವರ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ; ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:7
17 ತಿಳಿವುಗಳ ಹೋಲಿಕೆ  

ನೀನು ನಿನ್ನ ವಿಷಯದಲ್ಲಿ - ನಾನು ಐಶ್ವರ್ಯವಂತನು, ಸಂಪನ್ನನು, ಒಂದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬಟ್ಟೆಯಿಲ್ಲದವನು ಆಗಿರುವದನ್ನು ತಿಳಿಯದೆ ಇದ್ದೀ.


ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯು ಲೇಸು.


ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ; ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.


ದುಃಖಪಡುವವರಾಗಿದ್ದರೂ ಯಾವಾಗಲೂ ಸಂತೋಷಪಡುವವರೂ, ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯವನ್ನುಂಟುಮಾಡುವವರೂ, ಏನೂ ಇಲ್ಲದವರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.


ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.


ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವದಕ್ಕೆ ಸೋತು ಹೋಗಿರುವನೋ ಅದರ ದಾಸತ್ವದೊಳಗಿರುವನಷ್ಟೆ.


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ತನಗೋಸ್ಕರ ದ್ರವ್ಯವನ್ನಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ ಅಂದನು.


ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವದು; ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವದು.


ಸತ್ತವನಾಗಿದ್ದು ಜೀವಿತನಾಗಿ ಬಂದ ಆದ್ಯಂತನು ಹೇಳುವದೇನಂದರೆ - ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು; ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವದನ್ನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಮಾಜದವರಾಗಿದ್ದಾರೆ.


ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಮ್ಮ ಸಹಾಯವಿಲ್ಲದೆ ಅರಸರಾದಿರಿ. ನೀವು ನಿಜವಾಗಿ ಅರಸರಾಗಿದ್ದರೆ ನನಗೆ ಎಷ್ಟೋ ಆನಂದವಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಅರಸರಾಗಿರುತ್ತಿದ್ದೆವು.


ನಿಮಗಿರುವದನ್ನು ಮಾರಿಬಿಟ್ಟು ದಾನಾ ಕೊಡಿರಿ; ಹಳೇವಾಗದಂಥ ಹಮ್ಮೀಣಿಗಳನ್ನು ಮಾಡಿಕೊಂಡು ಪರಲೋಕದಲ್ಲಿ ಲಯವಾಗದ ದ್ರವ್ಯವನ್ನು ಇಟ್ಟುಕೊಳ್ಳಿರಿ. ಅಲ್ಲಿ ಕಳ್ಳನು ಸಮೀಪಕ್ಕೆ ಬರುವದಿಲ್ಲ; ಅದು ನುಸಿಹಿಡಿದು ನಾಶವಾಗುವದಿಲ್ಲ.


ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಈಡು; ಬಡವನಿಗೆ ಯಾವ ಬೆದರಿಕೆಯೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು