Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:19 - ಕನ್ನಡ ಸತ್ಯವೇದವು J.V. (BSI)

19 ಕೆಟ್ಟವರು ಒಳ್ಳೆಯವರಿಗೆ ಬಾಗುವರು; ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕೆಟ್ಟವರು ಒಳ್ಳೆಯವರಿಗೆ ಬಾಗಬೇಕಾಗುವುದು; ದುಷ್ಟರು ಸಜ್ಜನರ ಬಾಗಿಲಿಗೆ ಅಡ್ಡಬೀಳಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೊನೆಯಲ್ಲಿ ಕೆಟ್ಟವರ ಮೇಲೆ ಒಳ್ಳೆಯವರು ಜಯಗಳಿಸುವರು. ಕೆಟ್ಟವರು ಬಲವಂತದಿಂದ ಒಳ್ಳೆಯವರ ಮುಂದೆ ತಲೆಬಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದುಷ್ಟರು ಒಳ್ಳೆಯವರಿಗೆ ಬಾಗುತ್ತಾರೆ, ದುಷ್ಟರು ನೀತಿವಂತರ ದ್ವಾರಗಳಲ್ಲಿ ಅಡ್ಡ ಬೀಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:19
17 ತಿಳಿವುಗಳ ಹೋಲಿಕೆ  

ದುಷ್ಟರನ್ನು ತುಳಿದುಬಿಡುವಿರಿ; ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು; ಇದು ಸೇನಾಧೀಶ್ವರ ಯೆಹೋವನ ನುಡಿ.


ಐಗುಪ್ತದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರಿಸುವವನು ಯೋಸೇಫನೇ. ಹೀಗಿರುವದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.


ಆಗ ಫರೋಹನು ಮೋಶೆ ಆರೋನರನ್ನು ಕರಿಸಿ - ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು; ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.


ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು; ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;


ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.


ಯೆಹೋಷಾಫಾಟನು - ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು ಅಂದದರಿಂದ ಇಸ್ರಾಯೇಲ್ ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.


ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡಬಿದ್ದು - ನಮಗೆ ಒಂದು ದುಡ್ಡನ್ನೂ ರೊಟ್ಟಿಯ ಚೂರನ್ನೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವದಕ್ಕಾದರೂ ನಮ್ಮನ್ನು ಸೇರಿಸಿಕೋ ಎಂದು ಅವನನ್ನು ಬೇಡಿಕೊಳ್ಳುವರು ಎಂಬದೇ ಅಂದನು.


ಆಗ ನಿನ್ನ ಪರಿವಾರದವರಾದ ಇವರೆಲ್ಲರೂ ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡುವರು; ಆಮೇಲೆ ನಾನು ಹೊರಟುಹೋಗುವೆನು ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ನಿನ್ನ ಸೇವಕನಾದ ನಮ್ಮ ತಂದೆಗೆ ಕ್ಷೇಮ; ಅವನು ಇನ್ನೂ ಇದ್ದಾನೆ ಅಂದರು.


ಮತ್ತು ಅವರ ಬಳಿಗೆ ಹೋಗಿ ವಿನಯವಾಗಿ ಮಾತಾಡಿ ಹೊರಕ್ಕೆ ಕರೆದುಕೊಂಡು ಬಂದು - ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಮೂರ್ಖರಿಗೆ ಮೂರ್ಖತನವೇ ಸ್ವಾಸ್ತ್ಯ; ಜಾಣರಿಗೆ ಜ್ಞಾನವೇ ಮುಕುಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು