Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:21 - ಕನ್ನಡ ಸತ್ಯವೇದವು J.V. (BSI)

21 ನೆರೆಯವನನ್ನು ತಿರಸ್ಕರಿಸುವವನು ದೋಷಿ; ದರಿದ್ರನನ್ನು ಕನಿಕರಿಸುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹಸಿದವನನ್ನು ತಿರಸ್ಕರಿಸುವವನು ಪಾಪಿಷ್ಠನು; ದಲಿತರಿಗೆ ದಯೆ ತೋರಿಸುವವನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ, ಬಡವರ ಮೇಲೆ ಕನಿಕರ ತೋರಿಸುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:21
28 ತಿಳಿವುಗಳ ಹೋಲಿಕೆ  

ಬಡವರಿಗೆ ದಾನಮಾಡುವವನು ಕೊರತೆಪಡನು; ಕಣ್ಣು ಮುಚ್ಚಿಕೊಳ್ಳುವವನು ಬಹುಶಾಪಕ್ಕೆ ಒಳಗಾಗುವನು.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ನೆರೆಯವನನ್ನು ಹೀನೈಸುವವನು ಬುದ್ಧಿಹೀನನು; ವಿವೇಕಿಯು ಬಾಯಿಬಿಡನು.


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು; [ಪರರ] ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ನೀವು ಮಂದಮತಿಗಳಾಗಿರದೆ ಯಾರು ವಾಗ್ದಾನಗಳನ್ನು ನಂಬಿ ಅವುಗಳ ಫಲಕ್ಕೋಸ್ಕರ ಬಹು ದಿವಸಗಳವರೆಗೂ ಕಾದಿದ್ದು ಆ ಫಲವನ್ನು ಹೊಂದುತ್ತಾರೋ ಅವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.


ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು.


ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವದು.


ದಯಾಳುವಾಗಿ ಧನಸಹಾಯಮಾಡುವವನೂ ತನ್ನ ಕಾರ್ಯಗಳನ್ನು ನೀತಿಯಿಂದ ನಡಿಸುವವನೂ ಭಾಗ್ಯವಂತನು.


ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ ಅವನ ಪ್ರಾರ್ಥನೆಗೆ ಕಿವಿಗೊಟ್ಟನು.


ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ಉದಾಸೀನಮಾಡುವಂಥ ಕೆಲವರಿಗೆ ಒಂದು ಸಾಮ್ಯವನ್ನು ಹೇಳಿದನು.


ದುರಾತ್ಮನು ಕೇಡಿನ ಮೇಲೆ ಮನಸ್ಸಿಡುವನು; ನೆರೆಯವನಿಗೂ ದಯೆತೋರಿಸನು.


ಬಡ್ಡಿಬಾಚಿಗಳಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವದು.


ನೀವು - ಬಿಡುಗಡೆಯುಂಟಾಗುವ ಏಳನೆಯ ವರುಷವು ಸಮೀಪವಾಯಿತೆಂದು ನೀಚವಾದ ಆಲೋಚನೆಯನ್ನು ಮಾಡಿ ಆ ಬಡ ಸಹೋದರನ ವಿಷಯದಲ್ಲಿ ಮೋರೆ ಕರ್ರಗೆಮಾಡಿಕೊಂಡು ಏನೂ ಕೊಡದೆ ಇರಬಾರದು, ನೋಡಿರಿ. [ಹಾಗೆ ಧಿಕ್ಕರಿಸಿದರೆ] ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ತೋರಿಬಂದೀರಿ.


ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು; ತನ್ನ ಅನ್ನವನ್ನು ಬಡವರಿಗೆ ಕೊಡುತ್ತಾನಲ್ಲವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು