Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:22 - ಕನ್ನಡ ಸತ್ಯವೇದವು J.V. (BSI)

22 ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ; ಸುಯುಕ್ತಿಯುಳ್ಳವರು ಪ್ರೀತಿಸತ್ಯತೆಗಳಿಗೆ ಪಾತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕೆಟ್ಟದ್ದನ್ನು ಕಲ್ಪಿಸುವವರು ಮಾರ್ಗಭ್ರಷ್ಟರು; ಒಳ್ಳೆಯದನ್ನು ಕಲ್ಪಿಸುವವರು ಮರ್ಯಾದಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುರ್ಮಾರ್ಗಿಯು ದಾರಿ ತಪ್ಪುವನು. ಒಳ್ಳೆಯದನ್ನು ಮಾಡಲು ಪ್ರಯತ್ನಿಸುವವನು ಪ್ರೀತಿಗೂ ಭರವಸೆಗೂ ಪಾತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕೆಟ್ಟದ್ದನ್ನು ಕಲ್ಪಿಸುವವರು ದಾರಿ ತಪ್ಪುವುದಿಲ್ಲವೇ? ಆದರೆ ಒಳ್ಳೆಯದನ್ನು ಕಲ್ಪಿಸುವವರಿಗೆ ಪ್ರೀತಿ ಸತ್ಯತೆಯು ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:22
19 ತಿಳಿವುಗಳ ಹೋಲಿಕೆ  

ಯೆಹೋವನು ಒಳ್ಳೆಯವನಿಗೆ ದಯೆಮಾಡುವನು; ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು.


ಇಷ್ಟವು ಔದಾರ್ಯದ ಪ್ರಮಾಣ; [ಇದ್ದರೂ ಇಲ್ಲವೆಂದು] ಸುಳ್ಳಾಡುವವನಿಗಿಂತಲೂ ಏನೂ ಇಲ್ಲದವನೇ ಲೇಸು.


ಮುಂಗೋಪಿಯು ಬುದ್ಧಿಗೆಡುವನು; ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.


ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ.


ಅವನು ನಿನ್ನ ಸಾನ್ನಿಧ್ಯವನ್ನು ಪಡೆದು ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮಸತ್ಯತೆಗಳು ಅವನ ಬೆಂಗಾವಲಾಗಿರಲಿ.


ಯೆಹೋವನ ವಿಧಿನಿಬಂಧನೆಗಳನ್ನು ಕೈಕೊಂಡು ನಡೆಯುವವರಿಗೆ ಆತನ ಎಲ್ಲಾ ಮಾರ್ಗಗಳು ಕೃಪೆಯೂ ಸತ್ಯತೆಯೂ ಉಳ್ಳವು.


ನೀನು ನನ್ನ ಹೆಸರಿನದಾಗಿ ಒಂದು ಮನೆಯನ್ನು ಕಟ್ಟುವದಕ್ಕೆ ಮನಸ್ಸುಮಾಡಿದ್ದು ಒಳ್ಳೇದೇ ಸರಿ.


ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೀಟಾದ ದಾರಿಯಿಂದಲೇ ಕರಕೊಂಡು ಬಂದಿದ್ದಾನೆ ಅಂದನು.


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ಅಲ್ಲದ ದಾರಿಯಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವದಿಲ್ಲ.


ಪ್ರೀತಿಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ;


ಶ್ರಮೆಯಿಂದ ಸಮೃದ್ಧಿ; ಹರಟೆಯಿಂದ ಕೊರತೆ.


ಕೇಡನ್ನು ಕಲ್ಪಿಸುವವನು ಕುಯುಕ್ತಿಕನು ಎನಿಸಿಕೊಳ್ಳುವನು.


ತಮ್ಮ ಹಾಸಿಗೆಗಳಲ್ಲೇ ಅನ್ಯಾಯವನ್ನು ಯೋಚಿಸಿ ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ! ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೆ.


ಆಗ ಆ ಮನುಷ್ಯರು - ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುವೆವು; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಮ್ಮ ಮಾತಿನಂತೆ ನಿನ್ನಲ್ಲಿ ದಯದಿಂದ ನಡೆದುಕೊಳ್ಳುವೆವು ಅಂದರು.


ಅವನ ಮನಸ್ಸಿನಲ್ಲಿರುವದು ದ್ರೋಹವೇ; ಕೇಡನ್ನು ನಿರಂತರ ಕಲ್ಪಿಸುತ್ತಾನೆ. ಜಗಳದ ಬೀಜವನ್ನು ಬಿತ್ತುತ್ತಾನೆ.


ಸನ್ಮಾರ್ಗಿಯು ನೆರೆಯವನಿಗೆ ಮಾರ್ಗ ತೋರಿಸುವನು; ದುರ್ಮಾರ್ಗಿಯು ಮಾರ್ಗತಪ್ಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು