Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:3 - ಕನ್ನಡ ಸತ್ಯವೇದವು J.V. (BSI)

3 ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವದು; ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವುದು; ಜ್ಞಾನಿಗಳ ವಚನಗಳು ಅವರನ್ನು ಕಾಪಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೂಢನ ಮಾತುಗಳು ಅವನಿಗೇ ತೊಂದರೆಯನ್ನು ಉಂಟುಮಾಡುತ್ತವೆ. ಜ್ಞಾನಿಯ ಮಾತುಗಳಾದರೋ ಅವನನ್ನು ಕಾಪಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬುದ್ಧಿಹೀನನ ಬಾಯಿಯಲ್ಲಿ ಗರ್ವದ ಅಂಕುರವಿದೆ, ಆದರೆ ಜ್ಞಾನವಂತರ ತುಟಿಗಳು ಅವರನ್ನು ಕಾಪಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:3
21 ತಿಳಿವುಗಳ ಹೋಲಿಕೆ  

ಕೆಟ್ಟವರ ಮಾತು ರಕ್ತಕ್ಕೆ ಹೊಂಚು; ಯಥಾರ್ಥವಂತರ ನುಡಿ ರಕ್ಷಣೆ.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ನೀನು ನನ್ನ ಸಹನವಾಕ್ಯವನ್ನು ಕಾಪಾಡಿದ್ದರಿಂದ ಭೂನಿವಾಸಿಗಳನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರುವದಕ್ಕಿರುವ ಶೋಧನೆಯ ಸಮಯದಲ್ಲಿ ನಿನ್ನನ್ನು ತಪ್ಪಿಸಿ ಕಾಪಾಡುವೆನು.


ತಪ್ಪಾದ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಬಂಡುಬಂಡಾದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ನಾಲ್ಕನೆಯ ಮೃಗದ ವಿಷಯವಾಗಿಯೂ ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ


ಆಸೆಬಡುಕನು ಜಗಳವನ್ನೆಬ್ಬಿಸುವನು; ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.


ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು; ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವದು.


ಧರ್ಮನಿಂದಕನೆನಿಸಿಕೊಳ್ಳುವ ಸೊಕ್ಕೇರಿದ ಅಹಂಕಾರಿಯು ಗರ್ವಮದದಿಂದ ಪ್ರವರ್ತಿಸುವನು.


ಜ್ಞಾನಹೀನನ ತುಟಿಗಳು ಜಗಳವನ್ನು ಹೂಡುತ್ತವೆ; ಅವನ ಬಾಯಿ ಪೆಟ್ಟುತಿನ್ನುವದಕ್ಕೆ ಕೂಗಿಕೊಳ್ಳುತ್ತದೆ.


ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಶಸ್ತ್ರಬಾಣಗಳು; ನಾಲಿಗೆಗಳು ಹದವಾದ ಕತ್ತಿಗಳೇ.


ಯೆಹೋವನು ವಂಚನೆಯ ತುಟಿಗಳನ್ನೂ ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.


ನಾಲಿಗೆಯೆಂಬ ಕೊರಡೆಗೆ ನೀನು ಮರೆಯಾಗಿರುವಿ; ವಿನಾಶವುಂಟಾದರೂ ನೀನು ಹೆದರುವದಿಲ್ಲ.


ಇನ್ನು ಮುಂದೆ ಹವ್ಮಿುನಿಂದ ನುಡಿಯಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗುವನು.


ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ ಕೊಬ್ಬಿನಿಂದಲೂ ಅವರಿಗೆ ವಿರೋಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.


ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ; ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಲ್ಲವೆ.


ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.


ಜ್ಞಾನಹೀನನಿಗೆ ಬಾಯಿ ನಾಶ; ತುಟಿಗಳು ಪಾಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು