Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:32 - ಕನ್ನಡ ಸತ್ಯವೇದವು J.V. (BSI)

32 ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:32
29 ತಿಳಿವುಗಳ ಹೋಲಿಕೆ  

ನಾನು ಯಾವ ದುಷ್ಕೃತ್ಯವನ್ನೂ ಮಾಡದಂತೆ ಕರ್ತನು ನನ್ನನ್ನು ಕಾಪಾಡಿ ತನ್ನ ಬಳಿಗೆ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಇದನ್ನು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿರುವದೇ ಉತ್ತಮವೆಂದು ಎಣಿಸುತ್ತೇವೆ.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ಹತ್ತಿರವಿರುವದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.


ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯು ಯಾವಾಗ ಆಗುವದೋ ಎಂದು ನಿರೀಕ್ಷಿಸಿಕೊಂಡಿದ್ದೇನೆ.


ಮರಣವಾಗುತ್ತದೆಂಬ ನಿಶ್ಚಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಹೀಗಾಯಿತು.


ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.


ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವದು.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೇತನವನ್ನು ಆತನ ಮುಂದೆ ಸ್ಥಾಪಿಸುವೆನು.


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;


ನನಗಂತೂ ಬದುಕುವದಂದರೆ ಕ್ರಿಸ್ತನೇ, ಸಾಯುವದು ಲಾಭವೇ.


ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ಸೈರಣೆಯಿಂದ ಸೈರಿಸಿಕೊಂಡಿದ್ದಾನೆ.


ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು.


ಯೇಸು ತಿರಿಗಿ ಅವರಿಗೆ - ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ; ಮತ್ತು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.


ಒಡೆಯನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.


ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.


ಇನ್ನೂ ಬೇಯದಿರುವಾಗಲೇ ಒಲೆಗಿಕ್ಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.


ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ಎಚ್ಚತ್ತಾಗ ನಿನ್ನ ಸ್ವರೂಪದರ್ಶನದಿಂದ ತೃಪ್ತನಾಗಿರುವೆನು.


ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ ಲೋಕದಿಂದಲೇ ಅಟ್ಟಿಬಿಡುವರು.


ನಿನ್ನ ಚಿತ್ತವನ್ನು ತಿಳಿಯಪಡಿಸಿ ನನ್ನನ್ನು ನಡಿಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.


ವಿವೇಕಿಯ ಹೃದಯ ಜ್ಞಾನಾಶ್ರಯ; ಜ್ಞಾನಹೀನನ ಒಳಗುಟ್ಟು ರಟ್ಟು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವದು; ದೋಷಿಯು ತನ್ನ ದೋಷದಿಂದಲೇ ಬಿದ್ದುಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು