Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:8 - ಕನ್ನಡ ಸತ್ಯವೇದವು J.V. (BSI)

8 ಮಾರ್ಗವನ್ನು ಗ್ರಹಿಸಿಕೊಳ್ಳುವದೇ ಜಾಣನ ಜ್ಞಾನ; ಮೂಢರ ಮೂರ್ಖತನ ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜಾಣನ ಜ್ಞಾನವು ತನ್ನ ಮಾರ್ಗಗಳಿಗೆ ಆಲೋಚನೆ ನೀಡುತ್ತದೆ. ಮೂಢರ ಬುದ್ಧಿಹೀನತೆಯು ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:8
21 ತಿಳಿವುಗಳ ಹೋಲಿಕೆ  

ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.


ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ನಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಲಕ್ಷಣವಾಗಿರುವ ಶಾಂತಗುಣದಿಂದ ಅದರ ಫಲವನ್ನು ತೋರಿಸಲಿ.


ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದಂದರೆ - ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದು.


ಅಧರ್ಮಿಯ ಸಂಬಳವು ಜೊಳ್ಳು; ಧರ್ಮವನ್ನು ಬಿತ್ತುವವನ ಲಾಭವು ಗಟ್ಟಿ.


ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.


ಹೀಗಿರಲು ನೀನು ನೀತಿನ್ಯಾಯಗಳನ್ನೂ ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.


ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು; ನಿನ್ನ ಆಜ್ಞೆಗಳನ್ನು ಕಲಿಯುವದಕ್ಕೆ ನನಗೆ ಬುದ್ಧಿಯನ್ನು ಕೊಡು.


ನಿನ್ನ ನಿಬಂಧನೆಗಳನ್ನು ಕೈಕೊಳ್ಳುವದರಲ್ಲಿ ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇದು!


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


[ಚೀಯೋನೇ] ಕಣ್ಣೆತ್ತು, ಬಡಗಲಿಂದ ಬರುವವರನ್ನು ನೋಡು; ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?


ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.


ಯಾಕಂದರೆ ಇಹಲೋಕ ಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಳ್ಳುತ್ತಾನೆಂತಲೂ


ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು; ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.


ಶಿಷ್ಟರ ಉದ್ದೇಶ ನ್ಯಾಯ; ದುಷ್ಟರ ಆಲೋಚನೆ ಮೋಸ.


ಆಗ ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವಂತೆ ಜ್ಞಾನವೂ ಮೂಢತ್ವಕ್ಕಿಂತ ಶ್ರೇಷ್ಠವೆಂದು ಗೋಚರವಾಯಿತು.


ಏಕಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ನಿರಂತರವಾಗಿ ಮರೆತುಹೋಗುವನು. ಈಗಿನವರೆಲ್ಲಾ ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರಷ್ಟೆ. ಆಹಾ, ಮೂಢನಂತೆ ಜ್ಞಾನಿಯೂ ಸಾಯುವನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು