Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:14 - ಕನ್ನಡ ಸತ್ಯವೇದವು J.V. (BSI)

14 ವಿವೇಕಿಯ ಹೃದಯ ತಿಳುವಳಿಕೆಯನ್ನು ಹುಡುಕುವದು; ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ವಿವೇಕಿಯ ಮನ ತಿಳುವಳಿಕೆಯನ್ನು ಅರಸುವುದು; ಮತಿಹೀನನ ಬಾಯಿ ಮೂರ್ಖತನವನ್ನು ಮುಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ವಿವೇಕಿಯು ಮತ್ತಷ್ಟು ತಿಳುವಳಿಕೆಯನ್ನು ಪಡೆದುಕೊಳ್ಳಲು ಪ್ರಯತ್ನಿಸುವನು. ಮೂಢನು ಮತ್ತಷ್ಟು ಮೂಢತನವನ್ನು ಬಯಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ವಿವೇಕವುಳ್ಳವನ ಹೃದಯವು ಪರಿಜ್ಞಾನವನ್ನು ಹುಡುಕುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನೇ ತಿನ್ನುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:14
13 ತಿಳಿವುಗಳ ಹೋಲಿಕೆ  

ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳುವಳಿಕೆಯನ್ನು ಪಡೆಯುವನು.


ಇವರು ದಿವ್ಯದರ್ಶಿಗಳನ್ನು ಕುರಿತು - ನಿಮಗೆ ದರ್ಶನವಾಗದಿರಲಿ ಅನ್ನುತ್ತಾರೆ; ಮತ್ತು ಸಾಕ್ಷಾತ್ಕಾರಿಗಳಿಗೆ - ನಮಗಾಗಿ ನ್ಯಾಯವಾದವುಗಳನ್ನು ಸಾಕ್ಷಾತ್ಕರಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮಾಯವಾದವುಗಳನ್ನೇ ಸಾಕ್ಷಾತ್ಕರಿಸಿರಿ;


ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುವದು; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುವದು.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಆ ಸಭೆಯವರು ಥೆಸಲೋನಿಕದವರಿಗಿಂತ ಸದ್ಗುಣವುಳ್ಳವರಾಗಿದ್ದು ದೇವರ ವಾಕ್ಯವನ್ನು ಶುದ್ಧಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಏನೋ ಎಂಬ ವಿಷಯದಲ್ಲಿ ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದರು.


ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಂಡಿತ್ಯವನ್ನು ಹೊಂದುವನು, ವಿವೇಕಿಯು [ಮತ್ತಷ್ಟು] ಉಚಿತಾಲೋಚನೆಯುಳ್ಳವನಾಗುವನು.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.


ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ನಿನ್ನ ನೇಮಗಳನ್ನು ಕೈಕೊಂಡಿರುವದರಿಂದ ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.


ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ; ದಿನವೆಲ್ಲಾ ಅದೇ ನನ್ನ ಧ್ಯಾನ.


ಜಾಣನು ತಿಳಿದದ್ದನ್ನು ಗುಪ್ತಪಡಿಸುವನು; ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವದು.


ದೀನನ ದಿನಗಳೆಲ್ಲಾ ದುಃಖಭರಿತ; ಹರ್ಷಹೃದಯನಿಗೆ ನಿತ್ಯವೂ ಔತಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು