Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:18 - ಕನ್ನಡ ಸತ್ಯವೇದವು J.V. (BSI)

18 ಕೋಪಿಷ್ಟನು ವ್ಯಾಜ್ಯವನ್ನೆಬ್ಬಿಸುವನು; ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಉಗ್ರಕೋಪಿ ವ್ಯಾಜ್ಯವೆಬ್ಬಿಸುತ್ತಾನೆ; ದೀರ್ಘಶಾಂತನು ಜಗಳ ತೀರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮುಂಗೋಪಿಯು ಜಗಳವನ್ನು ಎಬ್ಬಿಸುವನು. ತಾಳ್ಮೆಯುಳ್ಳವನು ಶಾಂತಿಯನ್ನು ಸ್ಥಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಕೋಪಿಷ್ಟನು ವಿವಾದವನ್ನು ಎಬ್ಬಿಸುವನು. ಆದರೆ ತಾಳ್ಮೆಯಿಂದ ಇರುವವನು ಜಗಳವನ್ನು ಶಾಂತಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:18
21 ತಿಳಿವುಗಳ ಹೋಲಿಕೆ  

ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವದಕ್ಕೆ ಜಗಳಗಂಟಿಗ.


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವದು; ಬಿರುನುಡಿಯು ಸಿಟ್ಟನ್ನೇರಿಸುವದು.


ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.


ಕೋಪಿಷ್ಠನು ಜಗಳವನ್ನೆಬ್ಬಿಸುವನು; ಕ್ರೋಧಶೀಲನು ದೋಷಭರಿತನು.


ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು.


ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ; ತಾಳ್ಮೆಯು ದೊಡ್ಡ ದೋಷಗಳನ್ನು ಅಡಗಿಸುತ್ತದಲ್ಲವೆ.


ತುಂಟನು ಜಗಳ ಬಿತ್ತುತ್ತಾನೆ; ಚಾಡಿಕೋರನು ವಿುತ್ರರನ್ನು ಅಗಲಿಸುತ್ತಾನೆ.


ದ್ವೇಷವು ಜಗಳಗಳನ್ನೆಬ್ಬಿಸುತ್ತದೆ; ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.


ಆಸೆಬಡುಕನು ಜಗಳವನ್ನೆಬ್ಬಿಸುವನು; ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.


ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು; ಮೃದುವಚನವು ಎಲುಬನ್ನು ಮುರಿಯುವದು.


ಆಗ ಇಸ್ರಾಯೇಲ್ಯರು ಯೆಹೂದ್ಯರಿಗೆ - ಅರಸನಲ್ಲಿ ನಮಗೆ ಹತ್ತುಪಾಲು ಉಂಟಲ್ಲಾ; ದಾವೀದನ ವಿಷಯದಲ್ಲಿಯೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸನನ್ನು ಕರಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೋ ಅಂದರು. ಇಸ್ರಾಯೇಲ್ಯರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.


ಸೋಮಾರಿಯ ದಾರಿ ಮುಳ್ಳುಬೇಲಿ; ಯಥಾರ್ಥವಂತನ ಮಾರ್ಗ ರಾಜಮಾರ್ಗ.


ಭೂಪನ ಕೋಪ ಮೃತ್ಯುವಿನ ದೂತ; ಜಾಣನು ಅದನ್ನು ಶಮನಪಡಿಸುವನು.


ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ; ಸಿಟ್ಟುಗಾರನ ಸಹವಾಸ ಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು