Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:32 - ಕನ್ನಡ ಸತ್ಯವೇದವು J.V. (BSI)

32 ಶಿಕ್ಷೆಯನ್ನೊಲ್ಲದವನು ತನ್ನನ್ನೇ ನಿರಾಕರಿಸುವನು; ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಶಿಕ್ಷೆಯನ್ನು ಒಪ್ಪದವನು ತನಗೇ ಕೇಡುಮಾಡಿಕೊಳ್ಳುತ್ತಾನೆ. ಗದರಿಕೆಯನ್ನು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಶಿಸ್ತನ್ನು ನಿರಾಕರಿಸುವವನು, ತನಗೆ ತಾನೆ ಹಾನಿ ತಂದುಕೊಳ್ಳುತ್ತಾನೆ, ಆದರೆ ಗದರಿಕೆಗೆ ಕಿವಿಗೊಡುವವನು ವಿವೇಕವನ್ನು ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:32
27 ತಿಳಿವುಗಳ ಹೋಲಿಕೆ  

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಯೆಹೋವನ ಭಯವೇ ತಿಳುವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆ ಮಾಡುವರು.


ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುವದು; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುವದು.


ವಾಕ್ಯದ ಪ್ರಕಾರ ನಡೆಯುವವರಾಗಿರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.


ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು; ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.


ವಿವೇಕಿಯ ಹೃದಯ ತಿಳುವಳಿಕೆಯನ್ನು ಹುಡುಕುವದು; ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವದು.


ನೀವೋ ನನ್ನ ಸುಶಿಕ್ಷಣವನ್ನು ಹಗೆ ಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.


ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವದೇ ಇಲ್ಲ. ಆಜ್ಞೆಗೆ ಒಳಗಾಗುವದಿಲ್ಲ; ಇವನು ಮೊಂಡ ಕುಡಿಕ ತುಂಟ ಎಂದು ಸಾಕ್ಷಿ ಹೇಳಬೇಕು. ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ ಮೊಂಡನೂ ಅವಿಧೇಯನೂ ಆಗಿ


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ; ಗದರಿಕೆಯನ್ನು ಗಮನಿಸುವವನಿಗೆ ಮಾನ.


ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು; ಗದರಿಕೆಯನ್ನು ಗಮನಿಸುವವನು ಜಾಣನು.


ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು ಜ್ಞಾನಿಗಳ ನಡುವೆ ನೆಲೆಗೊಳ್ಳುವನು.


ಯೆಹೋವನ ಭಯವೇ ಜ್ಞಾನೋಪದೇಶ; ಗೌರವಕ್ಕೆ ಮೊದಲು ವಿನಯ.


ಅಜ್ಞಾನಿಗಳ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ; ತಮ್ಮ ಪಾಪವನ್ನು ಮರೆಮಾಜದೆ ಸೊದೋವಿುನವರಂತೆ ಮೆರೆಯಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.


ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು