Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:14 - ಕನ್ನಡ ಸತ್ಯವೇದವು J.V. (BSI)

14 ಭೂಪನ ಕೋಪ ಮೃತ್ಯುವಿನ ದೂತ; ಜಾಣನು ಅದನ್ನು ಶಮನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:14
18 ತಿಳಿವುಗಳ ಹೋಲಿಕೆ  

ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.


ರಾಜನ ರೋಷವು ಸಿಂಹದ ಗರ್ಜನೆ; ಅವನ ದಯೆಯು ಪೈರಿನ ಇಬ್ಬನಿ.


ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ತೂರ್ ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವದನ್ನು ನೋಡಿ ಒಂದೇ ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಬೇಕೆಂದು ಅರಸನನ್ನು ಬೇಡಿಕೊಂಡರು. ಯಾಕಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.


ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ - ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು;


ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ; ತಾಳ್ಮೆಯು ದೊಡ್ಡ ದೋಷಗಳನ್ನು ಅಡಗಿಸುತ್ತದಲ್ಲವೆ.


ದುರಾತ್ಮನಿಗೆ ದಂಗೆಯ ಮೇಲೇ ಮನಸ್ಸು; ಕ್ರೂರದೂತನು ಅವನ ಮೇಲೆ ಬರುವನು.


ತಮ್ಮ ದಣಿಗೆ ವಿರೋಧವಾಗಿ ಯಾವದೋ ತಪ್ಪುಮಾಡಿದ್ದರಿಂದ ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಭಕ್ಷ್ಯಕಾರರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಮಾಡಿ


ಕೋಪಿಷ್ಟನು ವ್ಯಾಜ್ಯವನ್ನೆಬ್ಬಿಸುವನು; ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು; ಯಥಾರ್ಥವಾದಿಯನ್ನು ಪ್ರೀತಿಸುವರು.


ಪ್ರಭುವಿನ ಮುಖಪ್ರಸನ್ನತೆ ಜೀವ; ಆತನ ದಯೆ ಮುಂಗಾರುಮುಗಿಲು.


ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು; ಜ್ಞಾನಿಗಳೋ ರೋಷಾಗ್ನಿಯನ್ನಾರಿಸುವರು.


ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸಪಾನಮಾಡುವದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣ ರಕ್ಷಣೆಯ ನಿವಿುತ್ತವಾಗಿ ಬಿನ್ನಹಮಾಡಲು ನಿಂತುಕೊಂಡನು.


ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು; ನ್ಯಾಯತೀರ್ಪು ಯೆಹೋವನಿಂದಲೇ ಆಗುವದು.


ಆಮೇಲೆ ದಾನಿಯೇಲನು ಅರಮನೆಗೆ ಸೇರಿ - ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು ಎಂದು ಅರಿಕೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು