Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:32 - ಕನ್ನಡ ಸತ್ಯವೇದವು J.V. (BSI)

32 ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ; ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ದೀರ್ಘಶಾಂತನು ಪರಾಕ್ರಮಶಾಲಿಗಿಂತ ಶ್ರೇಷ್ಠ; ತನ್ನನ್ನು ತಾನೆ ಗೆದ್ದವನು ಪಟ್ಟಣ ಗೆದ್ದವನಿಗಿಂತ ಬಲಿಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಶೂರನಾಗಿರುವುದಕ್ಕಿಂತ ತಾಳ್ಮೆಯಿಂದಿರುವುದೇ ಶ್ರೇಷ್ಠ; ಪಟ್ಟಣವನ್ನು ವಶಪಡಿಸಿಕೊಳ್ಳುವುದಕ್ಕಿಂತ ನಿಮ್ಮ ಕೋಪವನ್ನು ಸ್ವಾಧೀನದಲ್ಲಿಟ್ಟುಕೊಳ್ಳವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:32
16 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ಕೋಪಿಷ್ಟನು ವ್ಯಾಜ್ಯವನ್ನೆಬ್ಬಿಸುವನು; ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.


ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು.


ಕೆಟ್ಟತನಕ್ಕೆ ಸೋತು ಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.


ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ; [ಪರರ] ದೋಷವನ್ನು ಲಕ್ಷಿಸದಿರುವದು ಅವನಿಗೆ ಭೂಷಣ.


ಯೆಹೋವನು ಕನಿಕರವೂ ದಯೆಯೂ ದೀರ್ಘಶಾಂತಿಯೂ ಪೂರ್ಣಪ್ರೀತಿಯೂ ಉಳ್ಳವನು.


ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷವಿುಸಿದನಲ್ಲಾ; ಆದದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವದಕ್ಕಿಂತಲೂ ದೀನರ ಸಂಗಡ ದೈನ್ಯದಿಂದಿರುವದು ವಾಸಿ.


ದಮಸ್ಕದ ಅಬಾನಾ, ಪರ್ಪರ್ ಎಂಬ ಹೊಳೆಗಳು ಇಸ್ರಾಯೇಲ್ಯರ ಎಲ್ಲಾ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ವಾಸಿಯಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ ಎಂದು ಹೇಳಿ ಬಲು ಸಿಟ್ಟಿನಿಂದ ಹೊರಟುಹೋದನು.


ನರೆಗೂದಲೇ ಸುಂದರ ಕಿರೀಟವು; ಅದು ಧರ್ಮಮಾರ್ಗದಲ್ಲಿ ದೊರಕುವದು.


ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ.


ಆದಿಗಿಂತ ಅಂತ್ಯವು ಲೇಸು; ಹಮ್ಮುಗಾರನಿಗಿಂತ ತಾಳ್ಮೆಯುಳ್ಳವನು ಉತ್ತಮ.


ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು; ಮೃದುವಚನವು ಎಲುಬನ್ನು ಮುರಿಯುವದು.


ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ; ಕೋಪಕ್ಕೆ ಮೂಢರ ಎದೆಯೇ ನೆಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು