Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:33 - ಕನ್ನಡ ಸತ್ಯವೇದವು J.V. (BSI)

33 ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಮಡಲಿನಲ್ಲಿ ಚೀಟು ಹಾಕಬಹುದು, ಅದರ ತೀರ್ಪು ಯೆಹೋವನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:33
15 ತಿಳಿವುಗಳ ಹೋಲಿಕೆ  

ಚೀಟುಹಾಕುವದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವದು.


ಆಮೇಲೆ ಅವರಿಗೋಸ್ಕರ ಚೀಟುಹಾಕಿದರು. ಚೀಟು ಮತ್ತೀಯನಿಗೆ ಬಂದದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರ ಸಂಗಡ ಸೇರಿ ಎಣಿಸಲ್ಪಟ್ಟನು.


ಅನಂತರ ನಾವಿಕರೆಲ್ಲರು - ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣವೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ ಎಂಬದಾಗಿ ಮಾತಾಡಿಕೊಂಡು ಚೀಟುಹಾಕಲು ಚೀಟು ಯೋನನಿಗೆ ಬಂತು.


ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು; ನ್ಯಾಯತೀರ್ಪು ಯೆಹೋವನಿಂದಲೇ ಆಗುವದು.


ಇಸ್ರಾಯೇಲ್ಯರ ಪ್ರಭುಗಳು ಮಾತ್ರ ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತತ್ತು ಮಂದಿಯಲ್ಲಿ ಒಂಭತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿದ್ದುಕೊಂಡು ಒಬ್ಬನು ಪವಿತ್ರನಗರವಾಗಿರುವ ಯೆರೂಸಲೇವಿುನಲ್ಲಿ ವಾಸಿಸುವದಕ್ಕಾಗಿ ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತು ಮಾಡಿದರು.


ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟುಹಾಕಿ ದೇಶವನ್ನು ಅವರ ಶಾಖೆಗಳಿಗೆ ಹಂಚಿಕೊಟ್ಟನು.


ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮ ತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವಾಸ್ತ್ಯವು ಸಿಕ್ಕಿರುತ್ತದೆ. ಅದು ಅವರಿಗೇ ಇರಲಿ.


ನಾಳೆ ಬೆಳಿಗ್ಗೆ ನೀವು ಕುಲಕುಲವಾಗಿ ನನ್ನ ಬಳಿಗೆ ಬನ್ನಿರಿ. ಯೆಹೋವನು ಯಾವ ಕುಲವನ್ನು ಹಿಡಿಯುತ್ತಾನೋ ಆ ಕುಲವು ಗೋತ್ರ ಗೋತ್ರವಾಗಿಯೂ, ಯಾವ ಗೋತ್ರವನ್ನು ಹಿಡಿಯುತ್ತಾನೋ ಆ ಗೋತ್ರವು ಕುಟುಂಬ ಕುಟುಂಬವಾಗಿಯೂ, ಯಾವ ಕುಟುಂಬವನ್ನು ಹಿಡಿಯುತ್ತಾನೋ ಆ ಕುಟುಂಬದವರು ಒಬ್ಬೊಬ್ಬರಾಗಿಯೂ ಬರಬೇಕು.


ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ ನಮಗೊಬ್ಬ ಅರಸನನ್ನು ನೇವಿುಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದದರಿಂದ ನೀವು ಕುಲಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ ಎಂದು ಅಪ್ಪಣೆ ಮಾಡಿದನು.


ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ; ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.


ಮಾರ್ಗವು ಒಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ ವಿಗ್ರಹಗಳನ್ನು ಪ್ರಶ್ನೆಕೇಳಿ ಕಾಳಿಜವನ್ನು ಪರೀಕ್ಷಿಸಿದ್ದಾನೆ.


ಆಗ ಅವನು ಆ ಹೋತಗಳ ವಿಷಯವಾಗಿ ಯೆಹೋವನಿಗೋಸ್ಕರವೆಂದೂ ಅಜಾಜೇಲನಿಗೋಸ್ಕರವೆಂದೂ ಚೀಟುಗಳನ್ನು ಬರೆದುಹಾಕಬೇಕು.


ನಾವು ಚೀಟು ಹಾಕೋಣ; ಅದು ಬಿದ್ದ ಪ್ರಕಾರವೇ ಗಿಬೆಯದವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು