Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:11 - ಕನ್ನಡ ಸತ್ಯವೇದವು J.V. (BSI)

11 ದುರಾತ್ಮನಿಗೆ ದಂಗೆಯ ಮೇಲೇ ಮನಸ್ಸು; ಕ್ರೂರದೂತನು ಅವನ ಮೇಲೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದುರಾತ್ಮನ ಕಣ್ಣೆಲ್ಲಾ ದಂಗೆ ಏಳುವುದರ ಮೇಲೆ; ಕ್ರೂರದೂತನು ಎರಗಿ ಬರುವನು ಅವನ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದುಷ್ಟನಿಗೆ ದೇವರ ವಿರುದ್ಧ ದಂಗೆ ಏಳುವುದಕ್ಕೆ ಇಷ್ಟ. ಕೊನೆಯಲ್ಲಿ ದೇವರು ತನ್ನ ದೂತನನ್ನು ಕಳುಹಿಸಿ ಅವನನ್ನು ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ತಿರುಗಿ ಬೀಳುವವನು ಕೆಟ್ಟದ್ದಕ್ಕೇ ತವಕಪಡುತ್ತಾನೆ; ಆದಕಾರಣ ಮರಣ ದೂತರನ್ನು ಅವನ ವಿರುದ್ಧ ಕಳುಹಿಸಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:11
15 ತಿಳಿವುಗಳ ಹೋಲಿಕೆ  

ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದುಹಾಕಿದರು.


ಯೆಹೋಯಾದಾವನ ಮಗನಾದ ಬೆನಾಯನಿಗೆ ಅವನನ್ನು ಸಂಹರಿಸೆಂದು ಆಜ್ಞಾಪಿಸಲು ಇವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಅವರು ಆತನಿಗೆ - ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ಕಾಲಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ಒಕ್ಕಲಿಗರಿಗೆ ತನ್ನ ತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.


ಅರಸನು ಅವನಿಗೆ - ಅವನು ಹೇಳಿದಂತೆ ಮಾಡು; ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.


ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನಿದ್ದಲ್ಲಿಗೆ ಬಿಸಾಡಿದರು. ಕೂಡಲೆ ಅವನು ತುತೂರಿಯನ್ನು ಊದಿಸಿದನು; ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇವಿುನಲ್ಲಿದ್ದ ಅರಸನ ಬಳಿಗೆ ಬಂದನು.


ಅಕಸ್ಮಾತ್ತಾಗಿ ಬೆನ್ಯಾಮೀನ್‍ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟ ಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ತುತೂರಿಯನ್ನು ಊದಿ - ಇಸ್ರಾಯೇಲ್ಯರೇ, ದಾವೀದನಲ್ಲಿ ನಮಗೆ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಸ್ವಾಸ್ತ್ಯವಿಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ ಅಂದನು.


ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ - ಅಪ್ಪಣೆಯಾಗಲಿ, ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭವರ್ತಮಾನವನ್ನು ತಿಳಿಸುವೆನು ಅನ್ನಲು


ಇದಲ್ಲದೆ ಅವನು ಸಮಾಧಾನಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಕರೇಕಳುಹಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದರಿಂದ ಒಳಸಂಚು ಬಲವಾಗುತ್ತಾ ಹೋಯಿತು.


ಮಂದನಿಗೆ ನೂರು ಪೆಟ್ಟು ಹೊಡೆಯುವದಕ್ಕಿಂತಲೂ ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.


ಮೂರ್ಖತನದಲ್ಲಿ ಮುಣುಗಿರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.


ಮಗನೇ, ಯೆಹೋವನಿಗೂ ರಾಜನಿಗೂ ಭಯಪಡು; ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು