Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:15 - ಕನ್ನಡ ಸತ್ಯವೇದವು J.V. (BSI)

15 ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದುರ್ಜನರನ್ನು ಸಜ್ಜನರೆಂದೂ, ಸಜ್ಜನರನ್ನು ದುರ್ಜನರೆಂದೂ ನಿರ್ಣಯಿಸುವ ಇಬ್ಬರೂ ಸರ್ವೇಶ್ವರನಿಗೆ ಅಸಹ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು, ನೀತಿವಂತರನ್ನು ಖಂಡಿಸುವವನೂ ಇವರಿಬ್ಬರೂ ಯೆಹೋವ ದೇವರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:15
23 ತಿಳಿವುಗಳ ಹೋಲಿಕೆ  

ನಿರಪರಾಧಿಯಾಗಿಯೂ ಸನ್ಮಾರ್ಗಸ್ಥನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇ ಬಾರದು; ಅಂಥ ದುಷ್ಟತ್ವವನ್ನು ಮಾಡಿದವನಿಗೆ ನಾನು ಶಿಕ್ಷೆಯನ್ನು ವಿಧಿಸದೆ ಬಿಡುವದಿಲ್ಲ.


ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನೆಂದು ಹೇಳಲಿ!


ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವದು ಅಧರ್ಮ.


ಕುದುರೆಗಳು ಕೋಡುಗಲ್ಲಿನ ಮೇಲೆ ಓಡಾಡುವವೋ; ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷಮಾಡಿ ಧರ್ಮದ ಸುಫಲವನ್ನು ಕಹಿಗೆ ತಂದಿರಲ್ಲಾ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ನೀತಿವಂತನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಕೊಂದುಹಾಕಿದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.


ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.


ಶಿಷ್ಟಹಿಂಸಕರೇ, ಲಂಚಕೋರರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ, ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ಪ್ರಬಲ, ನನಗೆ ಗೊತ್ತಿದೆ.


ನ್ಯಾಯವನ್ನು ಕಹಿಮಾಡುವವರೇ, ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರೇ,


ಯೆಹೋವನು ಹಗೆಮಾಡುವ ವಸ್ತುಗಳು ಆರು ಇವೆ. ಹೌದು, ಏಳು ಆತನಿಗೆ ಅಸಹ್ಯಗಳಾಗಿ ತೋರುತ್ತವೆ.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕೂತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬದಾಗಿ ಜನರ ಎದುರಿನಲ್ಲಿ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಮೋಸದ ತ್ರಾಸು ಯೆಹೋವನಿಗೆ ಅಸಹ್ಯ; ನ್ಯಾಯದ ತೂಕ ಆತನಿಗೆ ಸಂತೋಷ.


ಜೀವತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.


ಶಿಷ್ಟನಿಗೆ ದಂಡ ಅಯುಕ್ತ; ಧರ್ಮಿಷ್ಟನಿಗೆ ಪೆಟ್ಟು ಅಧರ್ಮ.


ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತು ಬಿಟ್ಟು ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸ ಮಾಡುವರು.


ಅಯ್ಯೋ, ಕೆಟ್ಟದ್ದನ್ನು ಒಳ್ಳೇದೆಂದೂ ಒಳ್ಳೇದನ್ನು ಕೆಟ್ಟದ್ದೆಂದೂ ಬೋಧಿಸಿ ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸಿ ಕಹಿಯು ಸಿಹಿ, ಸಿಹಿಯು ಕಹಿ ಎಂದು ಸ್ಥಾಪಿಸುವವರ ಗತಿಯನ್ನು ಏನೆಂದು ಹೇಳಲಿ!


ಪರಾತ್ಪರನ ಸಾಕ್ಷಾತ್ತಾಗಿ ನ್ಯಾಯವನ್ನು ತಪ್ಪಿಸುವದು,


ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ನೀವು ಜವೆಗೋದಿಯ ಹಿಡಿಗಳನ್ನೂ ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವದರಿಂದ ಸಾಯದಿರತಕ್ಕವರನ್ನು ಸಾಯಿಸಿ ಸಾಯತಕ್ಕವರನ್ನು ಉಳಿಸಿ ನನ್ನ ಜನರ ನಡುವೆ ನನ್ನ ಘನತೆಗೆ ಕುಂದು ತಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು