Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:8 - ಕನ್ನಡ ಸತ್ಯವೇದವು J.V. (BSI)

8 ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೊಡುವವನ ಕಣ್ಣಿಗೆ ಲಂಚವು ಚಿಂತಾಮಣಿಯಂತೆ; ಎತ್ತ ತಿರುಗಿದರತ್ತ ಅದರಿಂದ ಜಯವಂತೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಲಂಚವು ಅದೃಷ್ಟ ಎಂದು ಭಾವಿಸಿಕೊಳ್ಳುವವರಿಗೆ, ಅವರು ಹೋದಲ್ಲೆಲ್ಲಾ ಅದೇ ಕಾರ್ಯಸಾಧಕದಂತೆ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:8
19 ತಿಳಿವುಗಳ ಹೋಲಿಕೆ  

ಲಂಚವನ್ನು ತೆಗೆದುಕೊಳ್ಳಬಾರದು; ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಯಾದವನ ನ್ಯಾಯವನ್ನು ಕೆಡಿಸುತ್ತದೆ.


ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಶಿಷ್ಟಹಿಂಸಕರೇ, ಲಂಚಕೋರರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ, ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ಪ್ರಬಲ, ನನಗೆ ಗೊತ್ತಿದೆ.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಗುಪ್ತ ಬಹುಮಾನವು ಕೋಪವನ್ನಾರಿಸುವದು; ಮಡಲಲ್ಲಿಟ್ಟ ಲಂಚವು ಬಲು ಸಿಟ್ಟನ್ನಣಗಿಸುವದು.


ದುಷ್ಟನು ಲಂಚವನ್ನು ಮಡಲಿನಿಂದ ತೆಗೆದುಕೊಂಡು ನ್ಯಾಯವನ್ನು ತಪ್ಪಿಸುವನು.


ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ - ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ ಅಂದನು.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.


ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.


ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಪ್ರಸಿದ್ಧಿಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.


ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಲಿಗೆ ಮರೆಯಾದದ್ದು ಒಂದೂ ಇಲ್ಲ.


ಆತನು ಮೇಲಣ ಲೋಕದಿಂದ ಕೈಚಾಚಿ ನನ್ನನ್ನು ಹಿಡಿದು ಮಹಾಜಲರಾಶಿಗಳೊಳಗಿಂದ ಎಳೆದನು.


ಕಸುಕೊಳ್ಳುವದು ಜ್ಞಾನಿಗೆ ಬುದ್ಧಿಗೇಡು; ಲಂಚವು ವಿವೇಕನಾಶಕ.


ಆದಕಾರಣ ಅವನು ಆ ಕಾಣಿಕೆಯನ್ನು ತನಗೆ ಮುಂಚಿತವಾಗಿ ಹೊಳೆಯಿಂದಾಚೆಗೆ ದಾಟಿಸಿ ತಾನು ಆ ರಾತ್ರಿ ತನ್ನ ಪಾಳೆಯದೊಳಗೆ ಇದ್ದನು.


ಕಾಣಿಕೆಯು ಅನುಕೂಲತೆಗೂ ಶ್ರೀಮಂತರ ಸಾನ್ನಿಧ್ಯಪ್ರವೇಶಕ್ಕೂ ಸಾಧನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು