Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:27 - ಕನ್ನಡ ಸತ್ಯವೇದವು J.V. (BSI)

27 ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ ಉಪದೇಶ ಕೇಳುವದನ್ನೇ ಬಿಟ್ಟುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮಗನೇ, ಉಪದೇಶ ಕೇಳುವುದನ್ನು ನಿಲ್ಲಿಸಬೇಡ; ನಿಲ್ಲಿಸಿದೆಯಾದರೆ ಬುದ್ಧಿಮಾತಿನಿಂದ ವಂಚಿತನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀನು ಬುದ್ಧಿವಾದವನ್ನು ಕೇಳದಿದ್ದರೆ, ನಿನ್ನ ತಪ್ಪುಗಳಲ್ಲಿಯೇ ಮುಂದುವರಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:27
22 ತಿಳಿವುಗಳ ಹೋಲಿಕೆ  

ಮತ್ತು ಆತನು ಅವರಿಗೆ - ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ಇನ್ನೂ ಕೂಡಿಸಿ ಕೊಡುವರು.


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರ್ರಿ. ಅವರು ಕುರೀವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುತ್ತಾರೆ; ಆದರೆ ಒಳಗೆ ನೋಡಿದರೆ ಅವರು ಹಿಡುಕೊಂಡು ಹೋಗುವ ತೋಳಗಳೇ.


ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳುವಳಿಕೆಯನ್ನೂ ಕಾಣಲಾರೆ.


ಈ ಉಪದೇಶಕ್ಕೆ ಒಪ್ಪದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ, ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.


ಅಜ್ಜೀಕಥೆಗಳಂತಿರುವ ಕೇವಲ ಪ್ರಾಪಂಚಿಕವಾದ ಕಥೆಗಳನ್ನು ತಳ್ಳಿಬಿಟ್ಟು ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ನೂಕಿಸಿಕೊಂಡು ಹೋಗುವವರ ಹಾಗಿರಬಾರದು.


ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ; ಅನ್ಯನ ಹಿಂದೆ ಹೋಗದೆ ಅವನ ಬಳಿಯಿಂದ ಓಡಿಹೋಗುತ್ತವೆ.


ಆಗ ಅವರು ರೊಟ್ಟಿಯ ಹುಳಿ ಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬದಾಗಿ ತಿಳುಕೊಂಡರು.


ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಎಂದು ಹೇಳಲು ಅವರು -


ನಿನ್ನ ಕೃತ್ಯಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;


ತಂದೆಯನ್ನು ಹೊಡೆದು ತಾಯಿಯನ್ನು ಓಡಿಸುವ ಮಗನು ನಾಚಿಕೆಯನ್ನೂ ಅವಮಾನವನ್ನೂ ಉಂಟುಮಾಡುವನು.


ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು; ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವದು.


ನೀವು ಬಾಬೆಲಿನ ಅರಸನ ಅಡಿಯಾಳಾಗುವದಿಲ್ಲ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು;


ಆಗ ಯೋನಾದಾಬನು ಅವನಿಗೆ - ನೀನು ಅಸ್ವಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ, ನಿನ್ನ ತಂದೆಯು ನಿನ್ನನ್ನು ನೋಡುವದಕ್ಕೆ ಬಂದಾಗ ಅವನಿಗೆ - ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೇ ಸಿದ್ಧಮಾಡಿ ಕೊಡುವದಾದರೆ ಊಟಮಾಡೇನು ಎಂದು ಹೇಳು ಅಂದನು.


ಅವರು ಅವನಿಗೆ - ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರಮಾಡು ಎಂಬದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು - ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು