Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:13 - ಕನ್ನಡ ಸತ್ಯವೇದವು J.V. (BSI)

13 ಅವರಾದರೋ ಕತ್ತಲ ಹಾದಿಗಳನ್ನು ಹಿಡಿಯಬೇಕೆಂದು ಧರ್ಮಮಾರ್ಗಗಳನ್ನು ತೊರೆದುಬಿಡುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು, ಧರ್ಮಮಾರ್ಗಗಳನ್ನು ತೊರೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂಥವರು ಹಿಡಿವುದು ಕತ್ತಲು ಹಾದಿಯನ್ನು, ತೊರೆದುಬಿಡುವರು ಸತ್ಯದ ಮಾರ್ಗವನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರಾದರೋ ನೀತಿಮಾರ್ಗವನ್ನು ಬಿಟ್ಟು ಪಾಪವೆಂಬ ಕತ್ತಲೆಯಲ್ಲಿ ಜೀವಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಕತ್ತಲೆಯ ಹಾದಿಗಳಲ್ಲಿ ನಡೆಯುವುದಕ್ಕೆ ನೇರವಾದ ದಾರಿಗಳನ್ನು ತೊರೆದುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:13
21 ತಿಳಿವುಗಳ ಹೋಲಿಕೆ  

ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ಜ್ಞಾನಮಾರ್ಗದಿಂದ ತಪ್ಪಿದವನಿಗೆ ಪ್ರೇತ ಸಮೂಹವೇ ವಿಶ್ರಾಂತಿಸ್ಥಾನ.


ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ.


ಯೇಸು ಅವರಿಗೆ - ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ; ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ನಿಮಗೆ ಇರುವಾಗಲೇ ಸಂಚಾರಮಾಡಿರಿ. ಕತ್ತಲೆಯಲ್ಲಿ ಸಂಚಾರಮಾಡುವವನಿಗೆ ತಾನು ಎಲ್ಲಿ ಹೋಗುತ್ತೇನೆಂದು ತಿಳಿಯದು.


ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು; ಅವನ ಹೆಸರು ಯೋಹಾನನು. ಈ ಯೋಹಾನನು ಸಾಕ್ಷಿಗಾಗಿ ಬಂದನು.


ಯೆಹೋವನನ್ನು ಆಶ್ರಯಿಸದೆ ಯೆಹೋವನ ದರ್ಶನವನ್ನು ಬಯಸದೆ ಯೆಹೋವನ ಮಾರ್ಗಬಿಟ್ಟವರನ್ನೂ ಧ್ವಂಸಪಡಿಸುವೆನು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮ ಮಾಡಿ ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.


ಇವರು ಬುದ್ಧಿಹೀನರೂ ವಿವೇಕ ಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂವಿುಯ ಅಸ್ತಿವಾರಗಳೆಲ್ಲಾ ಕದಲುತ್ತವೆ.


ಅವನ ಬಾಯಿಂದ ಕೆಡುಕೂ ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ ಪರಹಿತವನ್ನೂ ಬಿಟ್ಟೇ ಬಿಟ್ಟಿದ್ದಾನೆ.


ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನು ದಾರಿತಪ್ಪಿದವನು, ಎಲ್ಲರೂ ಕೆಟ್ಟುಹೋದವರೇ.


ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.


ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ವಕ್ರಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವ ಯಾವನೂ ಸಮಾಧಾನವನ್ನರಿಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು