Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:31 - ಕನ್ನಡ ಸತ್ಯವೇದವು J.V. (BSI)

31 ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯುದ್ಧಕ್ಕಾಗಿ ಸನ್ನದ್ಧವಾಗಿರಬಹುದು ಅಶ್ವಬಲ; ಜಯಸಿಗುವುದಾದರೋ ಸರ್ವೇಶ್ವರನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯುದ್ಧಕ್ಕಾಗಿ ಕುದುರೆಗಳನ್ನು ಸಿದ್ಧಪಡಿಸುತ್ತಾರೆ; ಆದರೆ ಜಯದ ನಿರ್ಧಾರ ಯೆಹೋವನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಆದರೆ ಜಯ ದೊರೆಯುವುದು ಯೆಹೋವ ದೇವರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:31
13 ತಿಳಿವುಗಳ ಹೋಲಿಕೆ  

ಕೆಲವರು ರಥಬಲದಲ್ಲಿ, ಕೆಲವರು ಅಶ್ವ ಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸಪಡುತ್ತಾರೆ; ಆದರೆ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೆ ದೃಷ್ಟಿಯಿಡುವದಿಲ್ಲ, ಯೆಹೋವನನ್ನು ಆಶ್ರಯಿಸುವದಿಲ್ಲ;


ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ; ಆಳಿನ ತೊಡೆಯ ಬಲವನ್ನು ಮೆಚ್ಚುವದಿಲ್ಲ.


ನಮ್ಮ ದೇವರು ನಮ್ಮನ್ನು ವಿಮೋಚಿಸುವದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.


ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿ; ನೀನು ನನ್ನ ಗೌರವಕ್ಕೆ ಆಧಾರನೂ ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.


ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. [ಯೆಹೋವನೇ,] ನಿನ್ನ ಆಶೀರ್ವಾದವು ನಿನ್ನ ಪ್ರಜೆಯ ಮೇಲೆ ಇರಲಿ. ಸೆಲಾ.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ಅರಸುಗಳಿಗೆ ಜಯಪ್ರದನೂ ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.


ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.


ಆದರೆ ದೇವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಟ್ಟಿದ್ದಾನೆ; ಆತನಿಗೆ ಸ್ತೋತ್ರ.


ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾ ಜಯವನ್ನುಂಟುಮಾಡಿದನು.


ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು