Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:7 - ಕನ್ನಡ ಸತ್ಯವೇದವು J.V. (BSI)

7 ಬಲ್ಲಿದನು ಬಡವನಿಗೆ ಒಡೆಯ; ಸಾಲಗಾರನು ಸಾಲಕೊಟ್ಟವನಿಗೆ ಸೇವಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಲ್ಲಿದನು ಬಡವನಿಗೆ ಒಡೆಯ; ಸಾಲಗಾರನು ಸಾಲಕೊಟ್ಟವನಿಗೆ ಸೇವಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಡವನು ಐಶ್ವರ್ಯವಂತನಿಗೆ ಗುಲಾಮನಾಗಿದ್ದಾನೆ. ಸಾಲ ತೆಗೆದುಕೊಳ್ಳುವವನು ಸಾಲಕೊಡುವವನಿಗೆ ಸೇವಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ; ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:7
16 ತಿಳಿವುಗಳ ಹೋಲಿಕೆ  

ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು.


ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ ಬಲ್ಲಿದರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.


ಬಡವನು ಬಿನ್ನೈಸುವನು; ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.


ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋಗುವವರು ಐಶ್ಚರ್ಯವಂತರಲ್ಲವೋ?


ಆ ಸಾಲಾ ತೀರಿಸುವದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನ ಒಡೆಯನು ಅವನನ್ನೂ ಅವನ ಹೆಂಡತಿಮಕ್ಕಳನ್ನೂ ಅವನ ಬದುಕೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.


ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ; ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯದಿರು.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ಧನಿಕರೇ, ಕೇಳಿರಿ; ನಿಮಗೆ ಬರುವ ದುರ್ದಶೆಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ದೇಶದ ದರಿದ್ರರನ್ನು ನಿರ್ಮೂಲ ಮಾಡುವವರೇ, ಕೇಳಿರಿ!


ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವದು? ಗೋದಿಯನ್ನು ಅಂಗಡಿಯಿಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ, ತೊಲವನ್ನು ಹೆಚ್ಚಿಸೋಣ, ಸುಳ್ಳುತಕ್ಕಡಿಯಿಂದ ಮೋಸಮಾಡೋಣ;


ಸಮಾರ್ಯಬೆಟ್ಟದಲ್ಲಿನ ಬಾಷಾನಿನ ಆಕಳುಗಳೇ, ಬಡವರನ್ನು ಹಿಂಸಿಸಿ ದಿಕ್ಕಿಲ್ಲದವರನ್ನು ಜಜ್ಜಿ ನಿಮ್ಮ ಪತಿಗಳಿಗೆ - ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಪ್ರಜೆ ಯಾಜಕ, ದಾಸ ದಣಿ, ತೊತ್ತು ಯಜಮಾನಿ, ಕೊಳ್ಳುವವನು ಮಾರುವವನು, ಸಾಲಕೊಡುವವನು ತರುವವನು, ಬಡ್ಡಿ ತೆಗೆಯುವವನು ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವದು.


ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಇಸ್ರಾಯೇಲ್ಯರು ನ್ಯಾಯವಂತನನ್ನು ಬೆಳ್ಳಿಗೆ ಮಾರುತ್ತಾರೆ, ಒಂದು ಜೊತೆಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ವಿಕ್ರಯಿಸುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು