Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:35 - ಕನ್ನಡ ಸತ್ಯವೇದವು J.V. (BSI)

35 ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ; ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ; ಬಡಿದರೂ ನನಗೆ ತಿಳಿಯಲಿಲ್ಲ; ಎಚ್ಚರವಾಗುವುದು ಯಾವಾಗ? ಮತ್ತೆ ಒಂದು ಸಾರಿ ಕುಡಿಯುವೆನು” ಎಂದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಅವರು ನನಗೆ ಬಡಿದರೂ ಗೊತ್ತಾಗಲಿಲ್ಲ; ಅವರು ನನಗೆ ಹೊಡೆದರೂ ನನಗೆ ಬಡಿದರೂ ಅರಿವಾಗಲಿಲ್ಲ. ಈಗ ನಾನು ಎಚ್ಚರಗೊಳ್ಳಲಾರೆ. ನನಗೆ ಮತ್ತಷ್ಟು ದ್ರಾಕ್ಷಾರಸಬೇಕು” ಎಂದು ನೀನು ಹೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಜನರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ನಾನು ಎಚ್ಚರವಾಗುವುದು ಯಾವಾಗ? ಪುನಃ ನಾನು ಅದನ್ನು ಕುಡಿದೇನು?” ಎಂದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:35
11 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು].


ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ ಮೂರ್ಖತನವು ಅವನಿಂದ ತೊಲಗದು.


ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿಕೊಳ್ಳುವ ಹಾಗೆ ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.


ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳುವದಕ್ಕೆ ಹೋಯಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ನಡೆದಿದ್ದಾರೆ.


ಅವರು ತಮ್ಮ ದುಃಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವದನ್ನು ಕೇಳೇ ಕೇಳಿದ್ದೇನೆ - ನೀನು ನನ್ನನ್ನು ಶಿಕ್ಷಿಸಿದ್ದೀ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು; ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ಆದರೆ ಇಗೋ, ಉಲ್ಲಾಸ, ಹರ್ಷ, ದನಕೊಯ್ಯುವದು, ಕುರಿಕಡಿಯುವದು, ಮಾಂಸತಿನ್ನುವದು, ದ್ರಾಕ್ಷಾರಸ ಕುಡಿಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವದು [ಇವೇ ನಿಮ್ಮ ಕಾರ್ಯ].


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು.


ನೀನು ಸಮುದ್ರದ ನಡುವೆಯಾಗಲಿ ಹಡಗಿನ ಕಂಬದ ತುದಿಯಲ್ಲಾಗಲಿ ಮಲಗಿರುವವನಂತೆ ಇರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು