ಜ್ಞಾನೋಕ್ತಿಗಳು 24:12 - ಕನ್ನಡ ಸತ್ಯವೇದವು J.V. (BSI)12 ಇದು ನನಗೆ ಗೊತ್ತಿರಲಿಲ್ಲ ಎಂದು ನೀನು ನೆವ ಹೇಳಿದರೆ ಹೃದಯಶೋಧಕನು ಗ್ರಹಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆಬಿಟ್ಟಾನೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈ ಸಂಗತಿ ಗೊತ್ತಿರಲಿಲ್ಲವೆಂದು ನೆವ ಹೇಳಬೇಡ; ಅಂತರಂಗ ಪರಿಶೋಧಕನಿಗೆ ನಿನ್ನ ಯೋಜನೆ ತಿಳಿದಿಲ್ಲವೆ? ನಿನ್ನ ಮನಸ್ಸನ್ನು ಸಮೀಕ್ಷಿಸುವ ಆತನಿಗೆ ಇದು ಮರೆಯೇ? ಮಾನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲವನ್ನಾತ ನೀಡುವನಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀನು, “ಅದು ನನಗೆ ಏನೂ ಗೊತ್ತಿಲ್ಲ” ಎಂದು ಹೇಳಿದರೆ, ಹೃದಯವನ್ನು ಪರಿಶೋಧಿಸುವ ದೇವರು ಅದನ್ನು ತಿಳಿಯುವದಿಲ್ಲವೋ? ನಿನ್ನ ಜೀವವನ್ನು ಕಾಯುವಾತನು ಅದನ್ನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ? ಅಧ್ಯಾಯವನ್ನು ನೋಡಿ |
ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;