Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:2 - ಕನ್ನಡ ಸತ್ಯವೇದವು J.V. (BSI)

2 ವಿಷಯವನ್ನು ರಹಸ್ಯಮಾಡುವದು ದೇವರ ಪ್ರಭಾವ; ವಿಷಯವನ್ನು ವಿಮರ್ಶೆಮಾಡುವದು ರಾಜರ ಪ್ರಭಾವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ವಿಷಯವನ್ನು ರಹಸ್ಯವಾಗಿಡುವುದು ದೇವರ ಮಹಿಮೆ, ವಿಷಯವನ್ನು ವಿಮರ್ಶೆಮಾಡುವುದು ರಾಜರ ಹಿರಿಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ವಿಷಯಗಳನ್ನು ರಹಸ್ಯವಾಗಿಡುವ ದೇವರಿಗೆ ಮಹಿಮೆ; ವಿಷಯಗಳನ್ನು ವಿಮರ್ಶಿಸುವ ರಾಜರಿಗೆ ಹಿರಿಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:2
20 ತಿಳಿವುಗಳ ಹೋಲಿಕೆ  

ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತಾಡಿದ್ದೇನೆ.


ನಾನು ಲೋಕಕ್ಕೆ ಅಸ್ತಿವಾರಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು.


ದರಿದ್ರರಿಗೆ ತಂದೆಯಾಗಿ ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು,


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು, ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬದೂ ಆ ಕಾರಣದಿಂದಲೇ ಹಾಳುಮಾಡಲ್ಪಟ್ಟಿತೆಂಬದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುವದು.


ನನ್ನ ಆಜ್ಞಾನುಸಾರ ವಿಚಾರಣೆಯಾಗುವಲ್ಲಿ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ತಿರುಗಿ ಬೀಳುತ್ತಾ ದ್ರೋಹಮಾಡುತ್ತಾ ದಂಗೆಯೆಬ್ಬಿಸುತ್ತಾ


ಆಕ್ಷೇಪಕನು ಸರ್ವಶಕ್ತನ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ ಎಂದು ಹೇಳಿದನು.


ಅರಸನಿಗೆ ಸರಿತೋಚುವದಾದರೆ ಯೆರೂಸಲೇವಿುನ ಈ ದೇವಾಲಯವನ್ನು ತಿರಿಗಿ ಕಟ್ಟುವದಕ್ಕೆ ಅರಸನಾದ ಕೋರೆಷನಿಂದ ಅಪ್ಪಣೆ ದೊರಕಿದ್ದು ಸತ್ಯವೋ ಎಂಬದರ ವಿಷಯವಾಗಿ ಬಾಬೆಲಿನ ರಾಜ ಭಂಡಾರದಲ್ಲಿ ಹುಡುಕಿನೋಡಲಿ. ಮತ್ತು ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬದು ನಮಗೆ ತಿಳಿಸೋಣವಾಗಲಿ ಎಂಬದೇ.


ಅರಸನಾದ ದಾರ್ಯಾವೆಷನ ಆಜ್ಞಾನುಸಾರವಾಗಿ ಗ್ರಂಥಸಂಗ್ರಹವಾಗಿದ್ದ ಬಾಬೆಲಿನ ಭಂಡಾರದಲ್ಲಿ


ಆಕಾಶವು ಉನ್ನತ, ಭೂವಿುಯು ಅಗಾಧ, ರಾಜರ ಹೃದಯವು ಅಗೋಚರ.


ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನೆಂದು ಉತ್ತರಕೊಡುವರು.


ದಾವೀದನು ವರ್ತಮಾನತಂದ ಆ ಪ್ರಾಯಸ್ಥನಿಗೆ - ಸೌಲನೂ ಅವನ ಮಗನಾದ ಯೋನಾತಾನನೂ ಸತ್ತಿರುವದು ನಿನಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನಿಸಲು ಅವನು -


ಅರಸನು - ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದಲ್ಲವೋ ಎಂದು ಕೇಳಿದನು. ಅದಕ್ಕೆ ಸ್ತ್ರೀಯು - ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವದಕ್ಕೆ ಆಗುವದಿಲ್ಲ; ನಿನ್ನ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.


ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವದು ಮಾನವಲ್ಲ.


ಆಕಾಶದ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸಲು ಮನಸ್ಸಿಟ್ಟೆನು; ನರಜನ್ಮದವರ ಕರ್ತವ್ಯವೆಂದು ದೇವರು ನೇವಿುಸಿರುವ ಆ ಕೆಲಸವೆಲ್ಲಾ ಬಹು ಪ್ರಯಾಸವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು