Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:18 - ಕನ್ನಡ ಸತ್ಯವೇದವು J.V. (BSI)

18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಯಜಮಾನನ ಮಾತಿಗೆ ಕಾಯುವವನು ಮಾನವನ್ನನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು, ಯಜಮಾನನ ಮಾತಿನಂತೆ ನಡೆಯುವವನು ಸನ್ಮಾನವನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂಜೂರವನ್ನು ಕಾಯುವವನು ಅದರ ಹಣ್ಣನ್ನು ತಿನ್ನುವನು; ಯಜಮಾನನನ್ನು ಕಾಯುವವನು ಸನ್ಮಾನವನ್ನು ಸವಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ಯಜಮಾನನಿಗಾಗಿ ಕಾಯುವವನು ಸನ್ಮಾನ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:18
35 ತಿಳಿವುಗಳ ಹೋಲಿಕೆ  

ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಮಾಡಿದವನಿಗೆ ದೊರೆಯುತ್ತದೆ.


ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೆ ಇರುವದುಂಟೋ? ಪಶುಗಳನ್ನು ಸಾಕಿದವನು ಅವುಗಳ ಹೈನಿನಿಂದ ಜೀವಿಸದೆ ಇರುವದುಂಟೋ?


ಸೊಲೊಮೋನನೇ, ಆ ಸಾವಿರ ರೂಪಾಯಿ ನಿನಗಿರಲಿ, ಫಲವನ್ನು ನೋಡಿಕೊಳ್ಳುವವರಿಗೆ ಇನ್ನೂರು ರೂಪಾಯಿ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.


ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ. ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.


ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.


ಅವನು ಅವನಿಗೆ - ಭಲಾ! ನೀನು ಒಳ್ಳೇ ಆಳು; ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಕೆಯುಳ್ಳವನಾಗಿದ್ದದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು ಎಂದು ಹೇಳಿದನು.


ಯಜಮಾನನು ಬಂದು ಯಾವ ಆಳು ಹೀಗೆ ಮಾಡುವದನ್ನು ಕಾಣುವನೋ ಆ ಆಳು ಧನ್ಯನು.


ತನ್ನ ಕೆಲಸದಲ್ಲಿ ಚಟುವಟಿಕೆಯಾಗಿರುವವನನ್ನು ನೋಡು; ಇಂಥವನು ರಾಜರನ್ನು ಸೇವಿಸುವನಲ್ಲದೆ ನೀಚರನ್ನು ಸೇವಿಸುವದಿಲ್ಲ.


ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು.


ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣಭಯದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.


ದಾಸತ್ವದಲ್ಲಿರುವವರೇ, ಈ ಲೋಕದಲ್ಲಿನ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ; ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ಕರ್ತನಿಗೆ ಭಯಪಡುವವರಾಗಿ ಸರಳಮನಸ್ಸಿನಿಂದ ಕೆಲಸಮಾಡಿರಿ.


ದೇವಾಲಯದ ಊಳಿಗವನ್ನು ನಡಿಸುವವರು ದೇವಾಲಯದ ಆದಾಯದಿಂದ ಊಟಮಾಡುತ್ತಾರೆಂಬದೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬದೂ ನಿಮಗೆ ತಿಳಿಯದೋ?


ಕೊರ್ನೇಲ್ಯನು ತನ್ನ ಸಂಗಡ ಮಾತಾಡಿದ ದೇವದೂತನು ಹೊರಟುಹೋದ ಮೇಲೆ ತನ್ನ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೇವಭಕ್ತನನ್ನೂ ಕರೆದು


ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು;


ಇಗೋ ನಿಮಗೆ ಮುಂದಾಗಿ ಹೇಳಿದ್ದೇನೆ.


ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು; ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು.


ಯಜಮಾನನ ಕೈಯನ್ನು ದಾಸನ ಕಣ್ಣುಗಳೂ ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳೂ ನೋಡುವ ಪ್ರಕಾರವೇ ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ನಾಮಾನನ ಕುಷ್ಠವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವದು ಅಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಅವನು ಹಿಮದಂತೆ ಬಿಳುಪಾಗಿ ಅವನ ಸನ್ನಿಧಿಯಿಂದ ಹೊರಟುಹೋದನು.


ಅವರು ಹೋದನಂತರ ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು - ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿ ಎಂದು ಕೇಳಿದನು. ಅದಕ್ಕೆ ಅವನು - ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ ಎಂದು ಉತ್ತರಕೊಟ್ಟನು.


ಆದರೆ ಯೇಹೋಷಾಫಾಟನು - ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿರುವದಿಲ್ಲವೋ ಎಂದು ಕೇಳಿದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲೊಬ್ಬನು ಅವನಿಗೆ - ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ ಎಂದು ಉತ್ತರಕೊಟ್ಟನು.


ಸ್ವಾವಿು ಹೇಳಿದ್ದೇನಂದರೆ - ಹೊತ್ತುಹೊತ್ತಿಗೆ ಅಶನಕ್ಕೆ ಬೇಕಾದದ್ದನ್ನು ಅಳೆದು ಕೊಡುವದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇವಿುಸಿದ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೆವಾರ್ತೆಯವನು ಯಾರು?


ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಕಬ್ಬಿಣವು ಕಬ್ಬಿಣವನ್ನು ಹೇಗೋ ವಿುತ್ರನು ವಿುತ್ರನ ಬುದ್ಧಿಯನ್ನು ಹಾಗೆ ಹರಿತ ಮಾಡುವನು.


ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಗೊಳಿಸುತ್ತದೋ ಮನುಷ್ಯನಿಗೆ ಮನುಷ್ಯನನ್ನು ಹೃದಯವು ಹಾಗೆ ತೋರ್ಪಡಿಸುತ್ತದೆ.


ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಹಾಮಾನನು ಆ ವಸ್ತ್ರಗಳನ್ನೂ ಕುದುರೆಯನ್ನೂ ತೆಗೆದುಕೊಂಡು ಬಂದು ಮೊರ್ದೆಕೈಯನ್ನು ಭೂಷಿಸಿ ಪಟ್ಟಣದ ಮಧ್ಯದಲ್ಲಿ ಮೆರವಣಿಗೆಮಾಡಿಸಿ ಅವನ ಮುಂದೆ - ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ ಎಂದು ಪ್ರಕಟಣೆ ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು