Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:24 - ಕನ್ನಡ ಸತ್ಯವೇದವು J.V. (BSI)

24 ಸಂಪತ್ತು ಶಾಶ್ವತವಾಗಿರುವದಿಲ್ಲವಷ್ಟೆ; ಕಿರೀಟವು ತಲತಲಾಂತರಗಳವರೆಗೆ ನಿಂತೀತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸಿರಿಸಂಪತ್ತು ಶಾಶ್ವತವಲ್ಲ; ಕಿರೀಟ ತಲತಲಾಂತರಕ್ಕೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಐಶ್ವರ್ಯ ಸದಾಕಾಲ ಇರುವಂಥದ್ದಲ್ಲ. ಅಂತೆಯೇ ಸಾಮ್ರಾಜ್ಯಗಳು ಶಾಶ್ವತವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ತಲತಲಾಂತರಕ್ಕೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:24
15 ತಿಳಿವುಗಳ ಹೋಲಿಕೆ  

ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಐಶ್ವರ್ಯವಂತನಾದ ಸಹೋದರನು ತಾನು ಹೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. ಯಾಕಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿಹೋಗುವನು.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.


ಅವನ ಸಂತತಿಯು ಶಾಶ್ವತವಾಗಿ ಇರುವದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು


ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವವು; ನಿನ್ನ ಸಿಂಹಾಸನವು ಶಾಶ್ವತವಾಗಿರುವದು ಎಂಬದೇ.


ನನ್ನ ಘನತೆಯನ್ನು ಸುಲಿದುಬಿಟ್ಟು ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾನೆ.


ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರ ಮಾಡಿದ್ದೀ.


ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ.


ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ಎತ್ತಿಹಾಕು! ಎಲ್ಲವೂ ವ್ಯತ್ಯಸ್ತವಾಗಲಿ; ಕೆಳಗಿನದನ್ನು ಮೇಲೆ ಮಾಡು, ಮೇಲಿನದನ್ನು ಕೆಳಗೆ ಮಾಡು;


ಈಗಲಾದರೋ ನಿನ್ನ ಅರಸುತನವು ನಿಲ್ಲುವದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆಹೋದದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇವಿುಸಿದ್ದಾನೆ ಎಂದು ಹೇಳಿದನು.


ದುಡ್ಡಿನಾಸೆಯಿಂದ ದುಡಿಯಬೇಡ; ಸ್ವಬುದ್ಧಿಯನ್ನೇ ಆಶ್ರಯಿಸಬೇಡ.


ಲೋಕದಲ್ಲಿ ಕೇವಲ ಈ ದುರ್ದಶೆಯನ್ನು ನೋಡಿದೆನು; ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವದರಲ್ಲಿಯೇ ಕೊರಗುತ್ತಿರುವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು