Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:14 - ಕನ್ನಡ ಸತ್ಯವೇದವು J.V. (BSI)

14 ಭಯದಿಂದ ನಡೆದುಕೊಳ್ಳುವವನು ಧನ್ಯನು; ಕಠಿನಹೃದಯನು ಕೇಡಿಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಭಯದಿಂದ ನಡೆದುಕೊಳ್ಳುವವನು ಭಾಗ್ಯವಂತನು; ಕಠಿಣ ಹೃದಯನು ಕೇಡಿಗೆ ತುತ್ತಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೇಡನ್ನು ಮಾಡಲು ಭಯಪಡುವವನು ಆಶೀರ್ವಾದ ಹೊಂದುವನು. ಆದರೆ ಮೊಂಡನು ಆಪತ್ತಿಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:14
18 ತಿಳಿವುಗಳ ಹೋಲಿಕೆ  

ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ; ಯೆಹೋವನಲ್ಲಿ ದಿನವೆಲ್ಲಾ ಭಯಭಕ್ತಿಯುಳ್ಳವನಾಗಿರು.


ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ.


ನಾನು ನಿಮಗೆ ಹಿತಮಾಡುವದನ್ನು ಬಿಟ್ಟು ವಿಮುಖನಾಗೆನು ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ನೀನು ಹೇಳುವದು ನಿಜ; ಅವರು ನಂಬದೆಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನವು ಇನ್ನೂ ಇರುವಲ್ಲಿ ನಿಮ್ಮೊಳಗೆ ಯಾವನಾದರೂ ಆ ವಾಗ್ದಾನದ ಫಲವನ್ನು ಹೊಂದದೆ ತಪ್ಪುವವನಾದಾನೋ ಎಂದು ನಾವು ಭಯಪಡೋಣ.


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಯಾಹುವಿಗೆ ಸ್ತೋತ್ರ! ಯಾವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.


ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ ಮಸ್ಸಾದಿನದಲ್ಲಿ ಮಾಡಿದಂತೆ ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿಗೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಎಂದಿಗೂ ಕದಲುವದಿಲ್ಲ.


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು; ಆತನಿಗೆ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ಆದರೆ ಐಗುಪ್ತದೇಶದ ಜೋಯಿಸರು ತಮ್ಮ ಗುಪ್ತವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವನು ಹೇಳಿದ್ದಂತೆಯೇ ಅವನು ಮೋಶೆ ಆರೋನರ ಮಾತನ್ನು ಕೇಳದೆ ಹೋದನು.


ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ ರಥಗಳೂ ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಹೋದರು.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಫರೋಹನು ಆ ಮಹತ್ಕಾರ್ಯವನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ತನ್ನ ಮನೆಗೆ ಹೊರಟುಹೋದನು.


ಪಾಪಿಯು ನೂರು ಸಲ ಅಧರ್ಮಮಾಡಿ ಬಹುಕಾಲ ಬದುಕಿದರೂ ದೇವರ ಮುಂದೆ ಹೆದರಿ ಆತನಲ್ಲಿ ಭಯಭಕ್ತಿಯುಳ್ಳವರಿಗೆ ಮೇಲೇ ಆಗುವದೆಂದು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು