Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:21 - ಕನ್ನಡ ಸತ್ಯವೇದವು J.V. (BSI)

21 ಪಕ್ಷಪಾತವು ಅಧರ್ಮ; ತುತ್ತನ್ನಕ್ಕಾಗಿ ಜನರು ದ್ರೋಹಮಾಡುವದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪಕ್ಷಪಾತ ತಕ್ಕುದಲ್ಲ; ತುತ್ತನ್ನಕ್ಕಾಗಿ ತಪ್ಪುಮಾಡುವವರುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪಕ್ಷಪಾತ ತಪ್ಪು. ಕೆಲವರಾದರೋ ಒಂದು ತುಂಡು ರೊಟ್ಟಿಗಾಗಿಯೂ ತಪ್ಪು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:21
11 ತಿಳಿವುಗಳ ಹೋಲಿಕೆ  

ನೀವು ಜವೆಗೋದಿಯ ಹಿಡಿಗಳನ್ನೂ ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವದರಿಂದ ಸಾಯದಿರತಕ್ಕವರನ್ನು ಸಾಯಿಸಿ ಸಾಯತಕ್ಕವರನ್ನು ಉಳಿಸಿ ನನ್ನ ಜನರ ನಡುವೆ ನನ್ನ ಘನತೆಗೆ ಕುಂದು ತಂದಿದ್ದೀರಿ.


ಇವು ಕೂಡ ಜ್ಞಾನಿಗಳ ಉಕ್ತಿಗಳೇ: - ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.


ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವದು ಅಧರ್ಮ.


ಲಂಚವನ್ನು ತೆಗೆದುಕೊಳ್ಳಬಾರದು; ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಯಾದವನ ನ್ಯಾಯವನ್ನು ಕೆಡಿಸುತ್ತದೆ.


ದುಷ್ಕಾರ್ಯವನ್ನು ಮಾಡುವವರು ಬಹು ಮಂದಿ ಆದಾಗ್ಯೂ ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ -


ಸುರಾಪಾನಮುಗಿದ ಕೂಡಲೆ ಸೂಳೆತನದಲ್ಲಿ ಬೀಳುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ.


ನ್ಯಾಯವಿಚಾರಿಸುವಾಗ ಮುಖದಾಕ್ಷಿಣ್ಯಮಾಡದೆ ಅಧಿಕರನ್ನೂ ಅಲ್ಪರನ್ನೂ ಸಮನಾಗಿ ತಿಳಿಯಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು