Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:22 - ಕನ್ನಡ ಸತ್ಯವೇದವು J.V. (BSI)

22 ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು; ತನಗೆ ಕೊರತೆಯಾಗುವದೆಂದು ಅರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಸ್ತಿ ಗಳಿಸಲು ಲೋಭಿಗೆ ಆತುರ; ತನಗೆ ಕೊರತೆ ಕಾದಿದೆಯೆಂದು ಆತ ಅರಿಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜಿಪುಣನು ಐಶ್ವರ್ಯವಂತನಾಗಲು ಆತುರಪಡುವನು: ಆದರೆ ತಾನು ಬೇಗನೆ ಬಡವನಾಗಲಿರುವುದನ್ನು ಅವನು ಗ್ರಹಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:22
11 ತಿಳಿವುಗಳ ಹೋಲಿಕೆ  

ಐಶ್ವರ್ಯವಂತರಾಗಬೇಕೆಂದು ಮನಸ್ಸು ಮಾಡುವವರು ದುಷ್ಪ್ರೇರಣೆಯೆಂಬ ಉರ್ಲಿನಲ್ಲಿ ಸಿಕ್ಕಿಕೊಂಡು ಬುದ್ಧಿವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರನಾಶನಗಳಲ್ಲಿ ಮುಳುಗಿಸುತ್ತವೆ.


ಲೋಭಿಯ ಅನ್ನವನು ಉಣ್ಣದಿರು; ಅವನ ರುಚಿಪದಾರ್ಥಗಳನ್ನು ಬಯಸಬೇಡ.


ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು; ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದಿರನು.


ಸೂಳೆಗಾರಿಕೆ ಕಳ್ಳತನ ಕೊಲೆ ಹಾದರ ದ್ರವ್ಯಾಶೆ ಕೆಡುಕುತನ ಮೋಸ ಬಂಡತನ ಹೊಟ್ಟೇಕಿಚ್ಚು ಬೈಗಳು ಸೊಕ್ಕು ಬುದ್ಧಿಗೇಡಿತನ ಇವೇ ಮೊದಲಾದವುಗಳ ಕೆಟ್ಟ ಆಲೋಚನೆಗಳು ಹೊರಡುತ್ತವೆ.


ನನ್ನ ಬದುಕನ್ನು ನಾನು ಬೇಕಾದ ಹಾಗೆ ಮಾಡಬಹುದಲ್ಲವೋ? ನಾನು ಒಳ್ಳೆಯವನಾಗಿರುವದು ನಿನ್ನ ಕಣ್ಣನ್ನು ಒತ್ತುತ್ತದೋ ಎಂದು ಹೇಳಿದನು.


ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು ಅಂದನು.


ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ; ಆತುರಪಡುವವರಿಗೆಲ್ಲಾ ಕೊರತೆಯೇ.


ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ ಬಲ್ಲಿದರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು