Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:4 - ಕನ್ನಡ ಸತ್ಯವೇದವು J.V. (BSI)

4 ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಧರ್ಮಶಾಸ್ತ್ರವನ್ನು ಕೈಗೊಳ್ಳದವರು ದುಷ್ಟರನ್ನು ಹೊಗಳುವರು; ಕೈಗೊಳ್ಳುವವರು ಅವರ ವಿರುದ್ಧ ಹೋರಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:4
31 ತಿಳಿವುಗಳ ಹೋಲಿಕೆ  

ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.


ಕತ್ತಲೆಗೆ ಸಂಬಂಧವಾದ ಕೃತ್ಯಗಳಿಂದ ಯಾವ ಪ್ರಯೋಜನವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬೈಲಿಗೆ ತಂದು ಖಂಡಿಸಿರಿ.


ಯೋಹಾನನು ಹೆರೋದನಿಗೆ - ನೀನು ಇವಳನ್ನು ಇಟ್ಟುಕೊಂಡಿರುವದು ಧರ್ಮವಲ್ಲವೆಂದು ಹೇಳುತ್ತಿದ್ದನು.


ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


ಸಿರಿ ಬಂದಾಗ ಹೆರರ ಹೊಗಳಿಕೆ ತಪ್ಪದು ಎಂಬಂತೆ ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ ಜನಸ್ತುತಿಯಿಂದಲೂ ಕೂಡಿದವನಾದರೂ


ಅದಕ್ಕೆ ಅವನು - ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನಮಾಡುತ್ತಿದ್ದಾಗ ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.


ಅವರು ಲೋಕದಿಂದ ಹುಟ್ಟಿದವರಾಗಿದ್ದಾರೆ; ಈ ಕಾರಣದಿಂದ ಅವರು ಲೋಕಪ್ರೇರಿತರಾಗಿ ಮಾತಾಡುತ್ತಾರೆ. ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.


ಅವರಿಗೂ ಪೌಲ ಬಾರ್ನಬರಿಗೂ ಭೇದವೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಸಹೋದರರು ಪೌಲ ಬಾರ್ನಬರನ್ನೂ ತಮ್ಮಲ್ಲಿ ಬೇರೆ ಕೆಲವರನ್ನೂ ಯೆರೂಸಲೇವಿುನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ನೇವಿುಸಿದರು.


ದುಷ್ಟನು ತನ್ನ ಮನೋರಥವು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಪರರ ಸೊತ್ತನ್ನು ಅಪಹರಿಸಿದವನು ಯೆಹೋವನನ್ನು ಅಲ್ಲಗಳೆದು ಬಿಟ್ಟುಬಿಡುತ್ತಾನೆ.


ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ - ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವದನ್ನು ಕಂಡು


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನೂ ನೀವೇ ಬಲ್ಲಿರಿ.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಕೂಡಿದ್ದ ಜನರು - ಇದು ಮನುಷ್ಯನ ನುಡಿಯಲ್ಲ, ದೇವರ ನುಡಿಯೇ ಎಂದು ಆರ್ಭಟಿಸಿದರು.


ಆದರೆ ಯೇಸು ಅವನಿಗೆ - ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ಧರ್ಮವನ್ನು ನೆರವೇರಿಸತಕ್ಕದ್ದಾಗಿದೆ ಎಂದು ಹೇಳಿದಾಗ ಅವನು ಒಪ್ಪಿಕೊಂಡನು.


ಭೀಕರವೂ ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ;


ಮಹಾಯಾಜಕ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.


ಆ ಕಾಲದಲ್ಲಿ ಜನರು ಸಬ್ಬತ್‍ದಿವಸ ಯೆಹೂದ ದೇಶದಲ್ಲಿ ತೊಟ್ಟಿಯೊಳಗೆ ದ್ರಾಕ್ಷೆತುಳಿಯುವದನ್ನೂ ಕಣದ ಕಾಳನ್ನು ಕೂಡಿಸಿ ಆ ಕಾಳು ದ್ರಾಕ್ಷಾರಸ ದ್ರಾಕ್ಷೆ ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇವಿುಗೆ ತರುವದನ್ನೂ ಕಂಡು ಅವರು ಆ ಆಹಾರಪದಾರ್ಥಗಳನ್ನು ಮಾರುವದಕ್ಕೆ ಬಂದಾಗ ಅವರನ್ನು ಗದರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು