Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:26 - ಕನ್ನಡ ಸತ್ಯವೇದವು J.V. (BSI)

26 ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು; ನ್ಯಾಯತೀರ್ಪು ಯೆಹೋವನಿಂದಲೇ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ರಾಜ್ಯಾಧಿಕಾರಿಗಳಲ್ಲಿ ದಯೆ ಯಾಚಿಸುವವರು ಅನೇಕರು; ಪ್ರತಿಯೊಬ್ಬನಿಗೆ ಸರಿಯಾದ ನ್ಯಾಯ ದೊರಕಿಸುವವನು ಸರ್ವೇಶ್ವರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅನೇಕರು ಅಧಿಪತಿಯಿಂದ ಸಹಾಯ ಬಯಸುವರು. ಆದರೆ ನ್ಯಾಯ ದೊರೆಯುವುದು ಯೆಹೋವನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅನೇಕರು ಅಧಿಕಾರಿಯ ದಯೆಯನ್ನು ಹುಡುಕುತ್ತಾರೆ. ಆದರೆ ಯೆಹೋವ ದೇವರಿಂದಲೇ ಪ್ರತಿಯೊಬ್ಬರಿಗೂ ನ್ಯಾಯ ದೊರಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:26
18 ತಿಳಿವುಗಳ ಹೋಲಿಕೆ  

ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು; ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೆ.


ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು.


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ; ಯೆಹೋವನ ಸಂಕಲ್ಪವೇ ಈಡೇರುವದು.


ನನ್ನಲ್ಲಿ ದೋಷವಿದೆಯೆಂದು ನನ್ನ ಬುದ್ಧಿಗೆ ತೋರುವದಿಲ್ಲವಾದರೂ ದೋಷವಿಲ್ಲದವನೆಂಬ ನಿರ್ಣಯವು ಇದರಿಂದಾಗುವದಿಲ್ಲ; ನನ್ನನ್ನು ವಿಚಾರಣೆಮಾಡುವವನು ಕರ್ತನೇ.


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ಅದಕ್ಕೆ ನಾನು - ನನ್ನ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ವ್ರಯಮಾಡಿದ್ದು ಹಾಳೇ, ಬರಿ ಗಾಳಿಯೇ; ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ, ನನಗೆ ಲಾಭವು ನನ್ನ ದೇವರಿಂದಲೇ ಆಗುವದು ಅಂದುಕೊಂಡೆನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು.


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿ ಬಿಡುವಂತೆ ಸರ್ವಶಕ್ತನಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳಕೊಂಡವನಾಗಬೇಕಾದರೆ ಹಾಗೆಯೇ ಆಗಲಿ ಎಂದು ಹೇಳಿದನು.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ.


ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ.


ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು


ಭೂಪನ ಕೋಪ ಮೃತ್ಯುವಿನ ದೂತ; ಜಾಣನು ಅದನ್ನು ಶಮನಪಡಿಸುವನು.


ಪ್ರಭುವಿನ ಮುಖಪ್ರಸನ್ನತೆ ಜೀವ; ಆತನ ದಯೆ ಮುಂಗಾರುಮುಗಿಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು