Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:4 - ಕನ್ನಡ ಸತ್ಯವೇದವು J.V. (BSI)

4 ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು; ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನ್ಯಾಯಪಾಲಕ ರಾಜನಿಂದ ನಾಡಿನ ಅಭಿವೃದ್ಧಿ; ಲಂಚಕೋರ ಅರಸನಿಂದ ದೇಶ ಹಿಡಿವುದು ವಿನಾಶದ ಹಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರಾಜನು ನ್ಯಾಯವಂತನಾಗಿದ್ದರೆ ದೇಶವು ಬಲಿಷ್ಠವಾಗಿರುವುದು. ರಾಜನು ತನ್ನ ಐಶ್ವರ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ವಿಪರೀತ ತೆರಿಗೆಗಳನ್ನು ಹಾಕಿದರೆ, ದೇಶವು ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನ್ಯಾಯದಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ, ಆದರೆ ಲಂಚಕೋರ ಅಧಿಕಾರಿ ದೇಶವನ್ನು ಕೆಡವಿ ಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:4
19 ತಿಳಿವುಗಳ ಹೋಲಿಕೆ  

ಬಡವರನ್ನು ನ್ಯಾಯವಾಗಿ ಆಳುವ ರಾಜನ ಸಿಂಹಾಸನವು ಶಾಶ್ವತವು.


ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು ರಾಜ್ಯದಲ್ಲಿ ಶಿರೋಮಣಿಯಾದ ದೇಶವನ್ನೆಲ್ಲ ದೋಚಿಕೊಳ್ಳತಕ್ಕವನನ್ನು ನೇವಿುಸುವನು; ಆಹಾ, ಕೆಲವು ದಿನಗಳೊಳಗೆ ನಾಶವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ.


ರಾಜನು ನ್ಯಾಯಾಸನಾರೂಢನಾಗಿ ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.


ಇದೇ ಯೆಹೋವನ ನುಡಿ - ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ, ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ; ನಾನು ನಿನ್ನನ್ನು ಕಾಪಾಡುತ್ತಾ [ನನ್ನ] ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇವಿುಸಿ ಬಂದಿಗಳಿಗೆ -


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು ಅಧರ್ಮವನ್ನಾಚರಿಸಲು ಅಸಹ್ಯಪಡುವರು.


ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.


ಅರಸನ ಬಲವು ನೀತಿಯಲ್ಲಿ ಆಸಕ್ತವಾಗಿದೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ನೀತಿನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿಸತ್ಯತೆಗಳೇ.


ನಿನ್ನನ್ನು ಮೆಚ್ಚಿ ತನ್ನ ಸನ್ನಿಧಿಯಲ್ಲಿ ಅರಸನಾಗುವದಕ್ಕೆ ನಿನ್ನನ್ನು ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲ್ಯರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.


ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.


ದಾವೀದನು ಇಸ್ರಾಯೇಲ್ಯರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನ್ಯಾಯತೀರಿಸುತ್ತಿದ್ದನು.


ಆಗ ಸಮುವೇಲನು - ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.


ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!


ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.


ರಾಜನ ತುಟಿಗಳಲ್ಲಿ ದೈವೋಕ್ತಿ; ನ್ಯಾಯತೀರಿಸುವದರಲ್ಲಿ ಅವನ ಬಾಯಿ ತಪ್ಪಿಹೋಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು