Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:10 - ಕನ್ನಡ ಸತ್ಯವೇದವು J.V. (BSI)

10 ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿತುಳುಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ನಿನ್ನ ಕಣಜಗಳು ದವಸಧಾನ್ಯದಿಂದ ಭರ್ತಿಯಾಗುವುವು, ನಿನ್ನ ತೊಟ್ಟಿಗಳು ದ್ರಾಕ್ಷಾರಸದಿಂದ ತುಂಬಿ ತುಳುಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ನಿನ್ನ ಕಣಜಗಳು ದವಸಧಾನ್ಯಗಳಿಂದ ತುಂಬಿರುತ್ತವೆ. ನಿನ್ನ ದ್ರಾಕ್ಷಾರಸದ ತೊಟ್ಟಿಗಳು ತುಂಬಿತುಳುಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು; ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:10
15 ತಿಳಿವುಗಳ ಹೋಲಿಕೆ  

ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.


ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು; ತನ್ನ ಅನ್ನವನ್ನು ಬಡವರಿಗೆ ಕೊಡುತ್ತಾನಲ್ಲವೆ.


ಕಣಗಳಲ್ಲಿ ಗೋದಿಯು ರಾಶಿರಾಶಿಯಾಗಿರುವದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು.


ಮತ್ತು ಈ ಚಿಕ್ಕವರಲ್ಲಿ ಒಬ್ಬನಿಗೆ ಯೇಸುವಿನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ದ್ರಾಕ್ಷೆ, ಅಂಜೂರ, ದಾಳಿಂಬರ, ಒಲೀವ, ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿವಸ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.


ಅವನು ತನ್ನ ದೇವರ ಒಲುಮೆಯನ್ನು ಪಡಕೊಳ್ಳುವದಕ್ಕೋಸ್ಕರ ದೇವಾಲಯದ ಸೇವಾಸಂಬಂಧದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದ ಮಾಡಿ ಕೊನೆಗಾಣಿಸಿದನು.


ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು; ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.


ಆಗ ಊರಲ್ಲಿರುವ ಅನ್ಯದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆಹೋದ ಲೇವಿಯರೂ ಉಂಡು ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ - ಜನರು ದೇವರಾದ ಯೆಹೋವನಿಗೋಸ್ಕರ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗೆ ಸಮೃದ್ಧಿಯನ್ನನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು