Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:15 - ಕನ್ನಡ ಸತ್ಯವೇದವು J.V. (BSI)

15 ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು; ಹೌದು, ಸಾಕೆನ್ನದವುಗಳು ನಾಲ್ಕು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಜಿಗಣೆಗೆ “ಕೊಡು, ಕೊಡು” ಎಂಬ ಇಬ್ಬರು ಹೆಣ್ಣು ಮಕ್ಕಳುಂಟು; ಎಂದೂ ತೃಪ್ತಿಪಡೆಯದವು ಮೂರುಂಟು; ಹೌದು, ‘ಸಾಕು’ ಎನ್ನದವುಗಳು ನಾಲ್ಕುಂಟು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೆಲವರು ರಕ್ತ ಕುಡಿಯುವ ಜಿಗಣೆಗಳಂತಿದ್ದಾರೆ. ಅವರು, “ನನಗೆ ಕೊಡು, ನನಗೆ ಕೊಡು, ನನಗೆ ಕೊಡು” ಎಂದು ಹೇಳುತ್ತಾರೆ. ಎಂದಿಗೂ ತೃಪ್ತಿಯಾಗದ ಮೂರು ಸಂಗತಿಗಳಿವೆ. ನಿಜವಾಗಿಯೂ ನಾಲ್ಕು ಸಂಗತಿಗಳು ಎಂದಿಗೂ ಸಾಕು ಎನ್ನವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಜಿಗಣೆಗೆ, ‘ಕೊಡು! ಕೊಡು!’ ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳುಂಟು. “ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ, ಹೌದು, ‘ಸಾಕು!’ ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:15
26 ತಿಳಿವುಗಳ ಹೋಲಿಕೆ  

ಗಂಭೀರಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು.


ಮೂರರ ಭಾರದಿಂದ ಭೂವಿುಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.


ಯೆಹೋವನು ಹಗೆಮಾಡುವ ವಸ್ತುಗಳು ಆರು ಇವೆ. ಹೌದು, ಏಳು ಆತನಿಗೆ ಅಸಹ್ಯಗಳಾಗಿ ತೋರುತ್ತವೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ಅದಕ್ಕವರು - ನಮ್ಮ ತಂದೆಯು ಅಬ್ರಹಾಮನೇ ಅಂದಾಗ ಯೇಸು ಅವರಿಗೆ - ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದಿರಿ.


ಒಳ್ಳೇದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡಿರಿ.


ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಯೆಹೋವನು ಇಂತೆನ್ನುತ್ತಾನೆ - ಯೆಹೂದವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿ ಆತನ ವಿಧಿಗಳನ್ನು ಕೈಕೊಳ್ಳದೆ ಅವರ ಪಿತೃಗಳು ಹಿಂಬಾಲಿಸಿದ ಸುಳ್ಳುದೇವತೆಗಳ ಮೂಲಕ ಸನ್ಮಾರ್ಗವನ್ನು ತಪ್ಪಿದರಷ್ಟೆ;


ಯೆಹೋವನು ಇಂತೆನ್ನುತ್ತಾನೆ - ಮೋವಾಬು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಎದೋವಿುನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣಮಾಡಿತಷ್ಟೆ.


ಯೆಹೋವನು ಇಂತೆನ್ನುತ್ತಾನೆ - ಅಮ್ಮೋನ್ಯರು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅವರಿಗಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರಷ್ಟೆ.


ಯೆಹೋವನು ಇಂತೆನ್ನುತ್ತಾನೆ - ಎದೋಮು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಕತ್ತಿಹಿಡಿದು ತನ್ನ ಸಹೋದರನನ್ನು ಹಿಂದಟ್ಟಿ ಕರುಣೆಯನ್ನು ತೊರೆದು ಸಿಟ್ಟಿನಿಂದ ಸದಾ ಸಿಗಿದುಬಿಡುತ್ತಾ ತನ್ನ ಕೋಪವನ್ನು ಶಾಶ್ವತಮಾಡಿಕೊಂಡಿತಷ್ಟೆ.


ಭೂವಿುಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.


ಯೆಹೋವನು ಇಂತೆನ್ನುತ್ತಾನೆ - ತೂರ್ ಪಟ್ಟಣವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಜನರನ್ನು ಗುಂಪುಗುಂಪಾಗಿ ಎದೋವಿುಗೆ ವಶಮಾಡಿಬಿಟ್ಟಿತಷ್ಟೆ;


ಯೆಹೋವನು ಇಂತೆನ್ನುತ್ತಾನೆ - ಗಾಜವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋವಿುಗೆ ವಶಮಾಡಿಬಿಟ್ಟಿತಷ್ಟೆ.


ಯೆಹೋವನು ಇಂತೆನ್ನುತ್ತಾನೆ - ದಮಸ್ಕವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.


ಸುರಾಪಾನಮುಗಿದ ಕೂಡಲೆ ಸೂಳೆತನದಲ್ಲಿ ಬೀಳುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ.


ಮಾಟಗಾತಿಯ ಮಕ್ಕಳೇ, ಸೂಳೆಗಾರನ ಮತ್ತು ಸೂಳೆಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ! ಯಾರನ್ನು ಅಣಕಿಸಿ ವಿನೋದ ಪಡುತ್ತೀರಿ?


ಪಾತಾಳಕ್ಕೂ ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ ಹಾಗೆ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.


ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂವಿುಯೊಳಗಿಂದ ಬಡವರನ್ನೂ ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ ಅಗಿದು ನುಂಗಿಬಿಡುವ ಮತ್ತೊಂದು ತರದವರುಂಟು.


ಯಾವವಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂವಿು, ಸಾಕಾಯಿತೆಂದು ಹೇಳದ ಬೆಂಕಿ, ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು