Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:8 - ಕನ್ನಡ ಸತ್ಯವೇದವು J.V. (BSI)

8 ನನ್ನಿಂದ ಕಪಟವನ್ನೂ ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ವಂಚನೆ ಸುಳ್ಳನ್ನು ನನ್ನಿಂದ ದೂರಮಾಡಿರಿ. ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ನನಗೆ ಕೊಡಬೇಡಿರಿ. ನನಗೆ ಅನುದಿನದ ಆಹಾರವನ್ನು ದಯಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:8
28 ತಿಳಿವುಗಳ ಹೋಲಿಕೆ  

ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು.


ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು; ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.


ವಿುಥ್ಯಾಮಾರ್ಗವನ್ನು ನನಗೆ ದೂರಮಾಡು; ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು.


ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ [ನಾಶಕರ].


ನಮ್ಮ ಅನುದಿನದ ಆಹಾರವನ್ನು ಈ ಹೊತ್ತೂ ದಯಪಾಲಿಸು.


ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು; ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವದು.


ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿ ನಿತ್ಯವೂ ಅರಸನಿಂದಲೇ ದೊರಕುತ್ತಿದ್ದವು.


ಇಸ್ರಾಯೇಲ್ಯರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ದೇಶದ ಮೇರೆಯನ್ನು ಸೇರುವ ತನಕ ನಾಲ್ವತ್ತು ವರುಷ ಮನ್ನವನ್ನೇ ಊಟಮಾಡುತ್ತಿದ್ದರು.


ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಅಯ್ಯೋ, ಅಕಾರ್ಯಗಳೆಂಬ ಹಗ್ಗಗಳಿಂದ ಅಪರಾಧ ದಂಡನೆಯನ್ನು, ತೇರನ್ನು ಹೊರಜಿಯಿಂದಲೋ ಎಂಬಂತೆ ಪಾಪದ ಫಲವನ್ನು ತಮ್ಮ ಕಡೆಗೆ ಎಳೆದುಕೊಳ್ಳುತ್ತಾ ಆತನು ತ್ವರೆಪಡಲಿ,


ಪ್ರಸಂಗಿಯು ಹೀಗೆ ಹೇಳುತ್ತಾನೆ - ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ!


ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ; ಪ್ರತಿಯೊಬ್ಬನು ತನ್ನ ಭೋಜನಕ್ಕೆ ಸರಿಯಾಗಿಯೇ ಕೂಡಿಸಿಕೊಂಡಿದ್ದನು.


ಇಸ್ರಾಯೇಲ್ಯರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ಇದೇನಿರಬಹುದು ಎಂದು ಹೇಳಿಕೊಂಡರು. ಮೋಶೆ ಅವರಿಗೆ - ಇದು ಯೆಹೋವನು ನಿಮಗೋಸ್ಕರ ಕೊಟ್ಟ ಆಹಾರವು; ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನಂದರೆ -


ಅವನ ಜೀವಿತಕಾಲವೆಲ್ಲ, ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು.


ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ದಿನವಹಿ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ನೋಡಿರಿ, ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂದು ನಾನು ಅಪ್ಪಣೆ ಮಾಡಿರುವದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು; ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು ಎಂದು ಹೇಳಿದನು.


ಯಾಕೋಬನು ಅಲ್ಲಿ - ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ಆಹಾರವನ್ನೂ ಉಡುವದಕ್ಕೆ ವಸ್ತ್ರವನ್ನೂ ಕೊಟ್ಟು


ಆಗ ಅವರಿಗೆ - ಈಗ ಅದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಿದಾಗ ತಕ್ಕೊಂಡು ಹೋಗಿ ಕೊಟ್ಟರು.


[ಇವರಲ್ಲಿ] ಯಾರೂ ನ್ಯಾಯವಾಗಿ ನ್ಯಾಯಾಸ್ಥಾನಕ್ಕೆ ಹೋಗುವದಿಲ್ಲ, ಯಾರೂ ಸತ್ಯವಾಗಿ ವಾದಿಸುವದಿಲ್ಲ; ಇವರು ಶೂನ್ಯವಾಗಿರುವದನ್ನು ನಂಬಿಕೊಂಡು ಅಬದ್ಧವನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ; ಅನುಗ್ರಹಿಸದಿರಬೇಡ, ನಾನು ಸಾಯುವದರೊಳಗಾಗಿ ಅವುಗಳನ್ನು ಕೈಗೂಡಿಸು.


ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಮಾಡಲೊಲ್ಲನು; ದುಷ್ಟನ ನಡತೆಯು ಹೇಸಿಕೆಗೂ ನಾಚಿಕೆಗೂ ಆಸ್ಪದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು