Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:12 - ಕನ್ನಡ ಸತ್ಯವೇದವು J.V. (BSI)

12 ನೀಚನೂ ದುಷ್ಟನೂ ಆಗಿರುವ ಅವನ ನಡತೆಯನ್ನು ನೋಡು; ಸೊಟ್ಟು ಬಾಯಿಯವನಾಗಿದ್ದಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀಚನೂ, ದುಷ್ಟನೂ ಆಗಿರುವ ಮನುಷ್ಯನ ನಡತೆಯನ್ನು ನೋಡು, ಅವನು ವಕ್ರ ಮಾತಿನವನಾಗಿದ್ದಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದುರುಳನೂ ನೀಚನೂ ಆದವನ ನಡತೆಯನ್ನು ನೋಡು: ಅವನ ಬಾಯಿಂದ ಹೊರಡುವುದು ಕುಟಿಲ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕೆಡುಕನೂ ನೀಚನೂ ಆಗಿರುವವನು ಸುಳ್ಳಾಡುತ್ತಾ ಅಡ್ಡಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತೊಂದರೆಕೊಡುವವನೂ ಕೆಡುಕನೂ ಆಗಿರುವವನ ಬಾಯಿಂದ ಕುಟಿಲ ಮಾತೇ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:12
26 ತಿಳಿವುಗಳ ಹೋಲಿಕೆ  

ಸರ್ಪಜಾತಿಯವರೇ, ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.


ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ; ಅವನ ತುಟಿಗಳಲ್ಲಿ ಬೆಂಕಿಯುರಿಯುತ್ತದೆ.


ಸೊಟ್ಟ ಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ತುಟಿಗಳ ವಕ್ರತೆಯನ್ನು ದೂರಮಾಡು.


ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದಲ್ಲದೆ ಹರಟೆಮಾತಾಡುವವರೂ ಇತರರ ಕೆಲಸದಲ್ಲಿ ಕೈಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.


ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವ್ಯತ್ಯಾಸ ಬೋಧನೆಗಳನ್ನು ಮಾಡಿ ಯೇಸುವಿನ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.


ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು; ಸುಳ್ಳುಗಾರನು ನಾಶನದ ನಾಲಿಗೆಗೆ ಕಿವಿಗೊಡುವನು.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಕತ್ತಿಗಳೇ. ನಮ್ಮನ್ನು ಕೇಳುವವರು ಯಾರು ಅಂದುಕೊಳ್ಳುತ್ತಾರೆ.


ಎಷ್ಟು ಕೊಂಚ ಕಿಚ್ಚು ಎಷ್ಟು ದೊಡ್ಡ ಕಾಡನ್ನು ಉರಿಸುತ್ತದೆ ನೋಡಿರಿ. ನಾಲಿಗೆಯೂ ಕಿಚ್ಚೇ. ನಾಲಿಗೆಯು ಅಧರ್ಮಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಟ್ಟದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕದಿಂದ ಬೆಂಕಿಹತ್ತಿಸಿಕೊಳ್ಳುತ್ತಾ ಪ್ರಪಂಚವೆಂಬ ಚಕ್ರಕ್ಕೆ ಬೆಂಕಿಹಚ್ಚುತ್ತದೆ.


ಧರ್ಮವು ಯಥಾರ್ಥವಂತರನ್ನು ಉದ್ಧರಿಸುವದು; ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.


ಅವನ ಮನಸ್ಸಿನಲ್ಲಿರುವದು ದ್ರೋಹವೇ; ಕೇಡನ್ನು ನಿರಂತರ ಕಲ್ಪಿಸುತ್ತಾನೆ. ಜಗಳದ ಬೀಜವನ್ನು ಬಿತ್ತುತ್ತಾನೆ.


ಇದರಿಂದ ನೀನು ದುರ್ಮಾರ್ಗದಿಂದಲೂ ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ.


ಅವನ ಬಾಯಿಂದ ಕೆಡುಕೂ ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ ಪರಹಿತವನ್ನೂ ಬಿಟ್ಟೇ ಬಿಟ್ಟಿದ್ದಾನೆ.


ಅವನ ಬಾಯಿಯು ಶಾಪಬಲಾತ್ಕಾರವಂಚನೆಗಳಿಂದ ತುಂಬಿದೆ; ಅವನ ನಾಲಿಗೆಯ ಕೆಳಗೆ ಹಾನಿಯೂ ನಾಶವೂ ಕೂತಿವೆ.


ದುಷ್ಟನು ತನ್ನ ಮನೋರಥವು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಪರರ ಸೊತ್ತನ್ನು ಅಪಹರಿಸಿದವನು ಯೆಹೋವನನ್ನು ಅಲ್ಲಗಳೆದು ಬಿಟ್ಟುಬಿಡುತ್ತಾನೆ.


ಆದಕಾರಣ ಎಲ್ಲಾ ನೀಚತನವನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆಯಿಂದ ಎಡೆಗೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸುವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ಒಂದು ಪುಟ್ಟಿಯಲ್ಲಿ ಫಲಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು; ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.


ದಾವೀದನು ಜನರ ಸಂಗಡ ಹೀಗೆ ಮಾತಾಡುತ್ತಿರುವದನ್ನು ಅವನ ಹಿರೀ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು - ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿ? ನಿನ್ನ ಸೊಕ್ಕೂ ತುಂಟತನವೂ ನನಗೆ ಗೊತ್ತದೆ; ನೀನು ಯುದ್ಧವನ್ನು ನೋಡುವದಕ್ಕೆ ಬಂದಿದ್ದೀ ಎಂದು ಅವನನ್ನು ಗದರಿಸಲು


ಶಿಷ್ಟನ ತುಟಿಯಲ್ಲಿ ಉಚಿತವಚನ; ದುಷ್ಟನ ಬಾಯಲ್ಲಿ ನೀಚವಚನ.


ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.


ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವದು.


ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಗಳನ್ನು ಕಲ್ಪಿಸುವನು; ತುಟಿಯನ್ನು ಮಡಸಿಕೊಳ್ಳುವವನು ಕೇಡನ್ನು ಸಾಧಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು