Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:14 - ಕನ್ನಡ ಸತ್ಯವೇದವು J.V. (BSI)

14 ಅವನ ಮನಸ್ಸಿನಲ್ಲಿರುವದು ದ್ರೋಹವೇ; ಕೇಡನ್ನು ನಿರಂತರ ಕಲ್ಪಿಸುತ್ತಾನೆ. ಜಗಳದ ಬೀಜವನ್ನು ಬಿತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನ ಮನದಲ್ಲಿರುವುದು ಮೂರ್ಖತನ; ಅವನು ಸತತ ಕಲ್ಪಿಸುವುದು ಕೆಡುಕುತನ. ಅವನು ಬಿತ್ತನೆ ಮಾಡುವುದು ಕಾಳಗ, ಕದನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ಕೆಡುಕ. ಎಲ್ಲಾ ಸಮಯಗಳಲ್ಲಿ ಅವನು ಕೆಡುಕನ್ನೇ ಆಲೋಚಿಸುತ್ತಾನೆ; ಎಲ್ಲೆಲ್ಲೂ ತೊಂದರೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ತನ್ನ ಹೃದಯದಲ್ಲಿ ಮೋಸಕರ ಯೋಜನೆಯನ್ನೇ ಮಾಡುತ್ತಾನೆ; ಯಾವಾಗಲೂ ಅವನು ಜಗಳವನ್ನು ಕಲ್ಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:14
22 ತಿಳಿವುಗಳ ಹೋಲಿಕೆ  

ತಮ್ಮ ಹಾಸಿಗೆಗಳಲ್ಲೇ ಅನ್ಯಾಯವನ್ನು ಯೋಚಿಸಿ ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ! ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೆ.


ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲಿಗಾಗಿ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟುಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ಅಲ್ಲಿ ಆತನು ನನಗೆ - ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;


ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ ಬುರುದೆಯನ್ನೂ ಕಾರುತ್ತಲಿರುತ್ತವೆ.


ಕಳ್ಳನ ಸಲಕರಣೆಗಳು ಕೆಟ್ಟವುಗಳೇ; ದೀನದರಿದ್ರರು ನ್ಯಾಯವಾದಿಗಳಾಗಿದ್ದರೂ ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು; ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವದು.


ದೋಷಿಯ ದಾರಿಡೊಂಕು; ಶುದ್ಧನ ನಡತೆ ಸರಲ.


ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ.


ಅವರು ಕೆಟ್ಟದ್ದನ್ನು ಮಾಡುವದರಲ್ಲಿ ಸಂತೋಷಿಸಿ ಕೆಟ್ಟವರ ದುಷ್ಟತನಕ್ಕೆ ಒಲಿಯುವರು.


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ಅಲ್ಲದ ದಾರಿಯಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವದಿಲ್ಲ.


ಅವರು ಕೇಡು ಕಲ್ಪಿಸುತ್ತಾರೆ; ಯಾವಾಗಲೂ ಜಗಳವೆಬ್ಬಿಸುತ್ತಾರೆ.


ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ; ಅವನ ತುಟಿಗಳಲ್ಲಿ ಬೆಂಕಿಯುರಿಯುತ್ತದೆ.


ವಕ್ರಹೃದಯನು ಶುಭವನ್ನು ಪಡೆಯನು; ಕೆಟ್ಟನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.


ಕೇಡನ್ನು ಕಲ್ಪಿಸುವವನು ಕುಯುಕ್ತಿಕನು ಎನಿಸಿಕೊಳ್ಳುವನು.


ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ; ಅವರ ತುಟಿಗಳ ಹಿಂದೆ ಹಾವಿನ ವಿಷವದೆ. ಸೆಲಾ.


ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವದು.


ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ; ಸುಯುಕ್ತಿಯುಳ್ಳವರು ಪ್ರೀತಿಸತ್ಯತೆಗಳಿಗೆ ಪಾತ್ರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು