Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:12 - ಕನ್ನಡ ಸತ್ಯವೇದವು J.V. (BSI)

12 ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳುವಳಿಕೆಯನ್ನು ಹೊಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜ್ಞಾನವೆಂಬ ನನಗೆ ಜಾಣ್ಮೆಯೆ ಸಹವಾಸಿ ಯುಕ್ತ ತಿಳುವಳಿಕೆ ನನಗೆ ಸಂಗಾತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನಾನೇ ಜ್ಞಾನ. ನಾನು ಒಳ್ಳೆಯ ನ್ಯಾಯತೀರ್ಪಿನೊಡನೆ ವಾಸಿಸುವೆ. ನಾನು ವಿವೇಕದೊಡನೆಯೂ ಒಳ್ಳೆಯ ಆಲೋಚನೆಯೊಡನೆಯೂ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಜ್ಞಾನವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ತಿಳುವಳಿಕೆಯನ್ನೂ ವಿವೇಚನೆಯನ್ನೂ ನಾನು ಹೊಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:12
16 ತಿಳಿವುಗಳ ಹೋಲಿಕೆ  

ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದುತ್ತಾನೆ.


ಮತ್ತು ಮೋಶೆಯು ಇಸ್ರಾಯೇಲ್ಯರಿಗೆ ಹೀಗಂದನು - ವಿಚಿತ್ರವಾಗಿ ನಯವಾದ ಕೆಲಸಗಳನ್ನು ಕಲ್ಪಿಸುವದಕ್ಕೂ


ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!


ಇವು ಮೂಢರಿಗೆ ಜಾಣತನವನ್ನೂ ಯೌವನಸ್ಥರಿಗೆ ತಿಳುವಳಿಕೆಯನ್ನೂ ಬುದ್ಧಿಯನ್ನೂ ಉಂಟುಮಾಡುವವು.


ಇದಲ್ಲದೆ ಆತನಲ್ಲಿ ನಾವು ದೇವರ ಸ್ವಕೀಯ ಪ್ರಜೆಯಾದೆವು, ಬರಬೇಕಾದ ಕ್ರಿಸ್ತನನ್ನು ಎದುರುನೋಡುತ್ತಿದ್ದ ನಾವು ತನ್ನ ಮಹಿಮೆಯನ್ನು ಪ್ರಖ್ಯಾತಿಪಡಿಸಬೇಕೆಂದು ಸಮಸ್ತಕಾರ್ಯಗಳನ್ನು ತನ್ನ ಇಷ್ಟದಂತೆ ನಡಿಸುವ ದೇವರು ತನ್ನ ಸಂಕಲ್ಪದ ಮೇರೆಗೆ ನಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು.


ಯೆಹೋವನೇ, ನಿನ್ನ ಕೈಕೆಲಸಗಳು ಎಷ್ಟೋ ವಿಧವಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿದ್ದೀ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿಷಯವಾದ ಜ್ಞಾನವು ತನಗೆ ಯೆಹೋವನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.


ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.


ಆತನು ರಹಸ್ಯವಾದ ತನ್ನ ಸಂಕಲ್ಪವನ್ನು ನಮಗೆ ತಿಳಿಯಪಡಿಸುವದರ ಮೂಲಕ ವಿಶೇಷವಾದ ಜ್ಞಾನವನ್ನೂ ಬುದ್ಧಿಯನ್ನೂ ಕೊಟ್ಟು ಆ ಕೃಪೆಯನ್ನು ಇನ್ನೂ ಹೆಚ್ಚಾಗಿ ನಮಗೆ ತೋರಿಸಿದ್ದಾನೆ.


ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧಪ್ರಾರಂಭವಾಗಿರುವದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತೂರಿಗಳನ್ನು ಊದಿದರು.


ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ತೂರ್‍ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು ಅವನ ಎಲ್ಲಾ ಕೆಲಸವನ್ನು ಮಾಡಿದನು.


ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿಯೂ


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು