Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:15 - ಕನ್ನಡ ಸತ್ಯವೇದವು J.V. (BSI)

15 ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ರಾಜರು ಆಳುವುದು ನನ್ನ ಸಹಾಯದಿಂದ ಅಧಿಪತಿಗಳು ನ್ಯಾಯತೀರ್ಪು ಮಾಡುವುದು ನನ್ನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಸಹಾಯದಿಂದ ರಾಜರುಗಳು ರಾಜ್ಯವಾಳುವರು; ಅಧಿಪತಿಗಳು ನ್ಯಾಯವಾದ ಕಾನೂನುಗಳನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ಮೂಲಕ ರಾಜರು ಆಳುವರು; ಪ್ರಧಾನರು ನ್ಯಾಯವಾದ ತೀರ್ಪು ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:15
27 ತಿಳಿವುಗಳ ಹೋಲಿಕೆ  

ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವರಿಂದ ನೇವಿುಸಲ್ಪಟ್ಟವರು.


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲುಮೇಯುವದೇ ನಿನಗೆ ಗತಿಯಾಗುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನ್ನ ತಿಳುವಳಿಕೆಗೆ ಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು ಎಂದು ಆಕಾಶವಾಣಿಯಾಯಿತು.


ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.


ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಪೂರ್ವದಲ್ಲಿ ನಿನಗಿದ್ದಂಥ ನ್ಯಾಯಾಧಿಪತಿಗಳನ್ನೂ ಮಂತ್ರಾಲೋಚಕರನ್ನೂ ಪುನಃ ಒದಗಿಸಿಕೊಡುವೆನು; ಆಮೇಲೆ ನೀನು ಧರ್ಮಪುರಿ ಎಂತಲೂ ಸುವ್ರತನಗರಿ ಎಂತಲೂ ಅನ್ನಿಸಿಕೊಳ್ಳುವಿ.


ಅರಸನ ಬಲವು ನೀತಿಯಲ್ಲಿ ಆಸಕ್ತವಾಗಿದೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ನನಗೆ ದಯಪಾಲಿಸಿದ ಅನೇಕ ಮಂದಿ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್‍ಸಿಂಹಾಸನದ ಮೇಲೆ ಕುಳ್ಳಿರಿಸುವದಕ್ಕೋಸ್ಕರ ಆರಿಸಿಕೊಂಡನು.


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಆತನು ಇಸ್ರಾಯೇಲ್ಯರನ್ನು ಸದಾ ಪ್ರೀತಿಸುವವನಾಗಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು - ಈ ಮಹಾಜನಾಂಗವನ್ನು ಆಳುವದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ ಎಂದು ನುಡಿದನು.


ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.


ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.


ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ - ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು ಎಂದು ಸೂಚಿಸಿದನು.


ನಿನ್ನ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಹೋಗುತ್ತಾ ಬರುತ್ತಾ ಇರುವದಕ್ಕೋಸ್ಕರ ನನಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಬೇಕು ಎಂದು ದೇವರನ್ನು ಬೇಡಿಕೊಂಡನು.


ಆದದರಿಂದ ಅರಸುಗಳಿರಾ, ವಿವೇಕಿಗಳಾಗಿರ್ರಿ; ದೇಶಾಧಿಪತಿಗಳಿರಾ, ಬುದ್ಧಿಮಾತುಗಳಿಗೆ ಕಿವಿಗೊಡಿರಿ.


ನನ್ನ ಮೂಲಕ ಪ್ರಭುಗಳು, ನಾಯಕರು, ಅಂತು ಭೂಪತಿಗಳೆಲ್ಲರೂ ದೊರೆತನ ಮಾಡುವರು.


ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು; ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.


ಆಗ ದೇವರು ಸೊಲೊಮೋನನಿಗೆ - ನೀನು ಘನಧನೈಶ್ವರ್ಯಗಳನ್ನಾಗಲಿ ವೈರಿಗಳ ಪ್ರಾಣಹರಣವನ್ನಾಗಲಿ ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳದೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವದಕ್ಕೋಸ್ಕರ ಜ್ಞಾನವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ಬೇಡಿಕೊಂಡದರಿಂದ ಅವು ನಿನಗೆ ದೊರಕುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು