Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:7 - ಕನ್ನಡ ಸತ್ಯವೇದವು J.V. (BSI)

7 ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೆ ಕಳಂಕವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕುಚೋದ್ಯಗಾರರನ್ನು ಶಿಕ್ಷಿಸುವವನು ತನ್ನನ್ನೆ ಅಪಮಾನಕ್ಕೆ ಗುರಿಮಾಡಿಕೊಳ್ಳುತ್ತಾನೆ. ದುಷ್ಟನನ್ನು ಗದರಿಸುವವನು ತನಗೇ ಕಳಂಕ ತಂದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಅಹಂಕಾರಿಗೆ ಅವನ ತಪ್ಪನ್ನು ತಿಳಿಸಲು ಪ್ರಯತ್ನಿಸಿದರೆ ಅವನು ನಿನ್ನನ್ನೇ ಖಂಡಿಸುವನು. ನೀನು ಕೆಡುಕನಿಗೆ ಅವನ ತಪ್ಪನ್ನು ತಿಳಿಸಿದರೆ ಅವನು ನಿನ್ನನ್ನೇ ಗೇಲಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪರಿಹಾಸ್ಯ ಮಾಡುವವನನ್ನು ಗದರಿಸುವವನು ತನ್ನನ್ನು ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:7
13 ತಿಳಿವುಗಳ ಹೋಲಿಕೆ  

ಧರ್ಮನಿಂದಕನು ಗದರಿಕೆಯನ್ನೊಲ್ಲನು; ಜ್ಞಾನಿಗಳ ಸಂಗಡ ಸೇರನು.


ಮೂಢನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.


ಅವರು ದೇವಪ್ರೇಷಿತರನ್ನು ಗೇಲಿಮಾಡಿ ಆತನ ಮಾತುಗಳನ್ನು ತುಚ್ಫೀಕರಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ ಆತನ ಕೋಪಾಗ್ನಿಯು ಆತನ ಪ್ರಜೆಯ ಮೇಲೆ ಉರಿಯಹತ್ತಿತು, ಅದರ ತಾಪವು ಆರಿಹೋಗಲೇ ಇಲ್ಲ.


ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ ಎಂದು ಹೇಳಿರಿ ಎಂಬದಾಗಿ ಆಜ್ಞಾಪಿಸಿದನು.


ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ - ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು ಅನ್ನಲು ಮೀಕಾಯೆಹುವು -


ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಅವನನ್ನು ಕಂಡ ಕೂಡಲೆ - ಇಸ್ರಾಯೇಲ್ಯರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ ಅಂದನು.


ಇಗೋ, ದೇವರು ಯಾವನನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನ ದಂಡನೆಯನ್ನು ತಾತ್ಸಾರಮಾಡಬೇಡ.


ಜ್ಞಾನಿಯಾದ ಮಗನು ತಂದೆಯ ಶಿಕ್ಷೆಯನ್ನು ಕೇಳುವನು: ಧರ್ಮನಿಂದಕನೋ ಗದರಿಕೆಯನ್ನು ಕೇಳನು.


ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು; ಏನೂ ಅನ್ನಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು