Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:10 - ಕನ್ನಡ ಸತ್ಯವೇದವು J.V. (BSI)

10 ಅನೇಕರು ಬರೀ ಮಾತಿನವರಾಗಿಯೂ ಮೋಸಗಾರರಾಗಿಯೂ ಇದ್ದು ಅಧಿಕಾರಕ್ಕೆ ಒಳಗಾಗದವರಾಗಿದ್ದಾರೆ; ಅವರೊಳಗೆ ಹೆಚ್ಚು ಜನರು ಸುನ್ನತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇತ್ತೀಚೆಗೆ ಅವಿಧೇಯರು, ಜೊಳ್ಳು ಮಾತಿನವರು ಹಾಗೂ ವಂಚಕಬೋಧಕರು ತಲೆ ಎತ್ತಿದ್ದಾರೆ. ಅವರಲ್ಲಿ ಕ್ರೈಸ್ತರಾಗಿರುವ ಯೆಹೂದ್ಯರು ಸಾಕಷ್ಟು ಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ, ಅನೇಕ ದಂಗೆಕೋರ ಜನರೂ ಬರೀ ಮಾತನಾಡುವವರೂ ಮೋಸಗೊಳಿಸುವವರೂ ಮುಖ್ಯವಾಗಿ ಸುನ್ನತಿಯಾಗಬೇಕೆಂದು ಹೇಳುವ ಗುಂಪಿನವರೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಪ್ನಾಚಿ ಜವಾಬ್ದಾರಿ ಸಂಬಾಳಿನಸ್ತಾನಾ ರ್‍ಹಾತಲಿ ಲೈ ಲೊಕಾ ಅಮ್ಚ್ಯಾ ಮದ್ದಿ ಹಾತ್, ಲೈ ಕರುನ್ ಜುದೆವಾಂಚ್ಯಾ ಘರಾನ್ಯಾತ್ನಾ ಪರಿರ್ವತನ್ ಹೊವ್ನ್ ಕ್ರಿಸ್ತಾಚ್ಯಾ ಫಾಟ್ನಾ ಯೆಲ್ಲೆ, ಎಕ್ಲ್ಯಾಕ್ನಿ ವಿರೊದ್ ಹೊವ್ಕ್ ಉಮ್ಮೆದ್ ಭರ್‍ತಲೆ, ಹೆನಿ ಸಗ್ಳೆ ಜಾನಾ ಪೊಕಳ್ ಗೊಸ್ಟಿಯಾನಿ ಲೊಕಾಕ್ನಿ ಮಳ್ಳ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:10
29 ತಿಳಿವುಗಳ ಹೋಲಿಕೆ  

ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರಗಳಿಗೆ ತಿರುಗಿಕೊಂಡಿದ್ದಾರೆ;


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಸಭೆಗೆ ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋದರರು ಅಲ್ಲಿ ಇದ್ದದರಿಂದ ಬಲಾತ್ಕಾರ ನಡೆದೀತೆಂಬ ಭಯವಿತ್ತು. ಅವರು ನಮ್ಮನ್ನೂ ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ನೂಕಿಸಿಕೊಂಡು ಹೋಗುವವರ ಹಾಗಿರಬಾರದು.


ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ.


ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಪೇತ್ರನು ಯೆರೂಸಲೇವಿುಗೆ ಬಂದಾಗ ಸುನ್ನತಿಯವರು - ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಅವನ ಕೂಡ ವಿವಾದಿಸಿದರು.


ಆದರೂ ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವದರಲ್ಲಿಯೂ ಜಾರತ್ವ ಮಾಡುವದರಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿದ್ದಾರೆ.


ಆದರೆ ನಿನ್ನಲ್ಲಿ ಒಳ್ಳೇದು ಒಂದುಂಟು, ಅದೇನಂದರೆ - ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನು ಸಹ ದ್ವೇಷಿಸುತ್ತಿ.


ಮಕ್ಕಳಿರಾ, ಇದು ಕಡೇ ಗಳಿಗೆಯಾಗಿದೆ; ಕ್ರಿಸ್ತವಿರೋಧಿ ಬರುತ್ತಾನೆಂದು ನೀವು ಕೇಳಿದ್ದೀರಷ್ಟೆ; ಈಗಲೂ ಕ್ರಿಸ್ತವಿರೋಧಿಗಳು ಬಹುಮಂದಿ ಎದ್ದಿದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ತಿಳುಕೊಳ್ಳುತ್ತೇವೆ.


ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ಹೋಗುವರು.


ಕಲ್ಪನಾಕಥೆಗಳಿಗೂ ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ದೇವರು ನಿರ್ವಹಿಸುವ ಕೆಲಸಕ್ಕೆ ಅನುಕೂಲವಾಗಿಲ್ಲ; ಇದರಲ್ಲಿ ನಂಬಿಕೆಯೇ ಮುಖ್ಯವಾದದ್ದು.


ಎಲೈ ಬುದ್ಧಿಯಿಲ್ಲದ ಗಲಾತ್ಯದವರೇ, ಯಾರು ನಿಮ್ಮನ್ನು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ವರ್ಣಿಸಲ್ಪಟ್ಟನಲ್ಲವೇ.


ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವದಿಲ್ಲ.


ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು - ನೀವು ಮೋಶೆಯ ಗ್ರಂಥದಲ್ಲಿ ಹೇಳಿರುವ ನೇಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.


ಅದಾಗಿ ನಮ್ಮೊಳಗಿಂದ ಹೋದ ಕೆಲವರು ನಮ್ಮಿಂದ ಏನೂ ಅಪ್ಪಣೆಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬದನ್ನು ಕೇಳಿದ್ದರಿಂದ ನಾವು ಕೆಲವರನ್ನು ಆರಿಸಿಕೊಂಡು


ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು; ಅಂದರೆ ಅದು ಅಧರ್ಮಿಗಳು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ದೇವಭಕ್ತಿಯಿಲ್ಲದವರು, ಪ್ರಾಪಂಚಿಕರು, ತಂದೆತಾಯಿಗಳನ್ನು ಹೊಡೆಯುವವರು, ನರಹತ್ಯಮಾಡುವವರು, ಜಾರರು, ಪುರುಷಗಾವಿುಗಳು, ನರಚೋರರು, ಸುಳ್ಳುಗಾರರು, ಅಬದ್ಧಪ್ರಮಾಣಿಕರು, ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆಯೇ ಹೊರತು ನೀತಿವಂತರಿಗೆ ನೇಮಕವಾಗಿಲ್ಲವೆಂದು ತಿಳಿದು ಉಪಯೋಗಿಸಬೇಕು.


ಸಭೆಯ ಹಿರಿಯನು ನಿಂದಾರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರು ದುರ್ಮಾರ್ಗಸ್ಥರೆನಿಸಿಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವರಾಗಲಿ ಆಗಿರಬಾರದು.


ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದೆ ನಡೆಯುವವನು ಸುಳ್ಳುಗಾರನಾಗಿದ್ದಾನೆ; ಸತ್ಯವೆಂಬದು ಅವನಲ್ಲಿ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು