Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:15 - ಕನ್ನಡ ಸತ್ಯವೇದವು J.V. (BSI)

15 ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲದವರಿಗೂ ಯಾವದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಮಲಿನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮನಃಶುದ್ಧಿಯುಳ್ಳವರಿಗೆ ಎಲ್ಲವೂ ಶುದ್ಧವಾಗಿಯೇ ಇದೆ. ಭ್ರಷ್ಟರಿಗೆ ಮತ್ತು ಅವಿಶ್ವಾಸಿಗಳಿಗೆ ಯಾವುದೂ ಶುದ್ಧವಲ್ಲ. ಏಕೆಂದರೆ, ಅವರ ಮನಸ್ಸೂ ಮನಸ್ಸಾಕ್ಷಿಯೂ ಮಲಿನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪರಿಶುದ್ಧರಾದ ಜನರಿಗೆ ಎಲ್ಲಾ ಸಂಗತಿಗಳು ಪರಿಶುದ್ಧವಾಗಿರುತ್ತವೆ. ಆದರೆ ಪಾಪಗಳನ್ನೇ ತುಂಬಿಕೊಂಡಿರುವ ಮತ್ತು ನಂಬಿಕೆಯಿಲ್ಲದ ಜನರಿಗೆ ಯಾವುದೂ ಪರಿಶುದ್ಧವಾಗಿರುವುದಿಲ್ಲ. ನಿಜವಾಗಿಯೂ, ಅವರ ಮನಸ್ಸುಗಳು ಮತ್ತು ಮನಸ್ಸಾಕ್ಷಿಗಳು ಮಲಿನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕೊನ್ ಪವಿತ್ರ್ ಹೊತ್ತ್ಯಾಕ್ನಿ ಸಗ್ಳಿ ಸಾಮಾನಾಬಿ ನಿತಳುಚ್, ಖರೆ ಕೊನ್ ಪವಿತ್ರ್ ನಾತ್ ಅನಿ ವಿಶ್ವಾಸ್ ಕರಿನಾತ್, ತೆಂಚಿ ಮನಾ ಅನಿ ಭುತ್ತುರ್‍ಲಿ ಮನಾ ಬಸ್ಟ್‌ಗಾರ್ ಹೊಲ್ಲಿ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:15
21 ತಿಳಿವುಗಳ ಹೋಲಿಕೆ  

ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಬಲ್ಲೆನು, ಮತ್ತು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧ.


ದೇವರು ಕಟ್ಟಿದ್ದನ್ನು ನೀನು ಆಹಾರದ ನಿವಿುತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವದು ಕೆಟ್ಟದ್ದು.


ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ಸ್ವಾತಂತ್ರ್ಯವುಂಟು, ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ಸ್ವಾತಂತ್ರ್ಯವುಂಟು,


ಆದರೆ ಬಾಯೊಳಗಿಂದ ಹೊರಡುವಂಥವುಗಳು ಮನಸ್ಸಿನೊಳಗಿಂದ ಬರುತ್ತವೆ; ಇವೇ ಮನುಷ್ಯನನ್ನು ಹೊಲೆ ಮಾಡುವವು.


ಸಂಶಯಪಟ್ಟು ಉಣ್ಣುವವನು ಸಂಶಯದಿಂದ ಉಣ್ಣುವ ಕಾರಣ ದೋಷಿಯಾಗಿದ್ದಾನೆ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.


ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬೇಡವೆಂದು ತಿರಿಗಿ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.


ಆದರೆ ಈ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈ ವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಕ್ಕೆ ನೈವೇದ್ಯ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿದ್ದು ಕಲೆಯನ್ನು ಹೊಂದುತ್ತದೆ.


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರಹಿತವನ್ನು ಚಿಂತಿಸಲಿ. ಕಟುಕರ ಅಂಗಡಿಯಲ್ಲಿ ಮಾರುವಂಥದು ಏನಿದ್ದರೂ ಅದನ್ನು ಮನಸ್ಸಿನಲ್ಲಿ ಸಂಶಯ ಹುಟ್ಟಿಸುವ ವಿಚಾರಣೆಮಾಡದೆ ತಿನ್ನಿರಿ.


ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವ ಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.


ಗರ್ವದ ದೃಷ್ಟಿ ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.


ಆಮೇಲೆ ಹಗ್ಗಾಯನು - ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವದನ್ನಾದರೂ ಸೋಕಿದರೆ ಅದು ಅಶುದ್ಧವಾಗುವದೋ ಎಂದು ಕೇಳಿದ್ದಕ್ಕೆ ಯಾಜಕರು - ಅಶುದ್ಧವೇ ಆಗುವದು ಎಂದು ಉತ್ತರಕೊಟ್ಟರು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು ಎಣಿಸಿಕೊಳ್ಳುವ ಬೇರೊಂದು ತರದವರುಂಟು.


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು