Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:9 - ಕನ್ನಡ ಸತ್ಯವೇದವು J.V. (BSI)

9 ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವದಕ್ಕೂ ಎದುರಿಸುವವರ ಬಾಯಿಕಟ್ಟುವದಕ್ಕೂ ಶಕ್ತನಾಗಿರುವಂತೆ ಕ್ರಿಸ್ತ ಬೋಧಾನುಸಾರವಾದ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಶ್ವಾಸಿಸಲು ಯೋಗ್ಯವಾದ ಹಾಗೂ ಕ್ರೈಸ್ತತತ್ವಗಳಿಗೆ ಅನುಗುಣವಾದ ಸಿದ್ಧಾಂತಗಳನ್ನು ಅವನು ಭದ್ರವಾಗಿ ಹಿಡಿದವನಾಗಿರಬೇಕು. ಆಗ ಸದ್ಬೋಧನೆಯಿಂದ ಇತರರನ್ನು ಪ್ರೋತ್ಸಾಹಿಸುವುದಕ್ಕೂ ಅದಕ್ಕೆ ವ್ಯತಿರಿಕ್ತವಾಗಿ ನಡೆಯುವವರ ತಪ್ಪುಗಳನ್ನು ಎತ್ತಿತೋರಿಸುವುದಕ್ಕೂ ಆತನು ಸಮರ್ಥನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಬೋಧಿಸುವ ಸತ್ಯವಾಕ್ಯವನ್ನು ಅವನು ನಂಬಿಗಸ್ತಿಕೆಯಿಂದ ಅನುಸರಿಸಬೇಕು. ಸತ್ಯವಾದ ಮತ್ತು ಯೋಗ್ಯವಾದ ಬೋಧನೆಯಿಂದ ಅವನು ಜನರಿಗೆ ಸಹಾಯ ಮಾಡುವವನಾಗಿರಬೇಕು. ಅವನು ಸತ್ಯಬೋಧನೆಗೆ ವಿರುದ್ಧವಾದ ಜನರಿಗೆ ಅವರ ತಪ್ಪನ್ನು ತೋರಿಸಿಕೊಡುವ ಸಾಮರ್ಥ್ಯ ಉಳ್ಳವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇತರರನ್ನು ಸ್ವಸ್ಥಬೋಧನೆಯಿಂದ ಪ್ರೋತ್ಸಾಹಿಸುವುದಕ್ಕೂ ಎದುರಿಸುವವರನ್ನು ಖಂಡಿಸುವಂತೆ ಮಾತನಾಡುವುದಕ್ಕೂ ಶಕ್ತನಾಗಿರಲು ಅವನು ಬೋಧಿಸಿದ ಪ್ರಕಾರ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ತೊ ತ್ಯಾ ಬರೊಸ್ಯಾಕ್ ಯೊಗ್ಯ್ ಅಸಲ್ಲ್ಯಾ ಬರ್‍ಯಾ ಖಬ್ರೆಕ್ ಘಟ್ಟ್ ಧರುನ್ ಘೆವ್ನ್ ರ್‍ಹಾವ್ಚೆ ಮನ್ತಲ್ಯಾ ವಿಶಯಾತ್‍ ಶಿಕ್ವುನ್ ಹೊಲಾ. ಹೆಜ್ಯಾಸಾಟಿ ತೊ ಲೊಕಾಕ್ನಿ ಖರೆಪಾನ್ ಸಿಕ್ವುನ್ಗೆತ್ ತೆಂಕಾ ಉಮ್ಮೆದ್ ಭರಿ ಸಾರ್ಕೆ ಕರುಚೆ, ಕೊನ್ ವಿರೊದ್ ಹೊವ್ನ್ ರ್‍ಹಾತಾ ನ್ಹಯ್, ತೆಂಕಾ ಜೊರ್ ಕರ್‍ತಲೊ ಹೊವ್ನ್ ರ್‍ಹಾವ್ಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:9
24 ತಿಳಿವುಗಳ ಹೋಲಿಕೆ  

ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ ಪತ್ರಿಕೆಯಿಂದಾಗಲಿ ನಿಮಗೆ ತಿಳಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.


ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥಬೋಧನಾವಾಕ್ಯಗಳನ್ನು ಮಾದರಿಮಾಡಿಕೊಂಡು ಅನುಸರಿಸು.


ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಉಪದೇಶಕ್ಕೂ ಸಮ್ಮತಿಸದೆ ಹೋದರೆ


ಆದದರಿಂದ ನೀನು ಹೊಂದಿದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೊಂಡು ಅದನ್ನು ಕಾಪಾಡಿಕೋ ಮತ್ತು ದೇವರ ಕಡೆಗೆ ತಿರುಗಿಕೋ. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯುವದೇ ಇಲ್ಲ.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.


ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಮಾಡು.


ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಗಳುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲರಾದ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ಆದರೆ ಎಲ್ಲವನ್ನೂ ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ;


ಸತ್ಯವನ್ನು ಎಂದರೆ ಜ್ಞಾನ ಸುಶಿಕ್ಷೆ ವಿವೇಕಗಳನ್ನು ಕೊಂಡುಕೋ; ಮಾರಿ ಬಿಡಬೇಡ.


ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.


ಬೇಗನೆ ಬರುತ್ತೇನೆ; ನಿನಗಿರುವದನ್ನು ಹಿಡಿದುಕೊಂಡಿರು; ನಿನ್ನ ಜಯಮಾಲೆಯನ್ನು ಯಾರೂ ಅಪಹರಿಸಬಾರದು.


ನಿಮಗಿರುವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದುಕೊಂಡಿರಬೇಕೆಂಬ ಅಪ್ಪಣೆಯನ್ನೇ ಹೊರತು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವದಿಲ್ಲವೆಂಬದೇ.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನಮಾಡುತ್ತಿದ್ದಾಗ ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.


ಎದುರಿಸುವವರನ್ನು ನಿಧಾನದಿಂದ ತಿದ್ದುವವನೂ ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ನೀನು ನನ್ನಿಂದ ಅನೇಕ ಸಾಕ್ಷಿಗಳ ಮುಂದೆ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ.


ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಬಿಡದೆ ಹಿಡುಕೋ. ಕೆಲವರು ಮನಸ್ಸಿನ ಒಳ್ಳೇ ಸಾಕ್ಷಿಯನ್ನು ತಳ್ಳಿಬಿಟ್ಟು ಕ್ರಿಸ್ತ ನಂಬಿಕೆಯ ವಿಷಯದಲ್ಲಿ ಹಡಗು ಒಡೆದು ನಷ್ಟಪಟ್ಟವರಂತೆ ಇದ್ದಾರೆ; ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ;


ಅವನು ಹೋಗಿ ಯೇಸುವೇ ಕ್ರಿಸ್ತನೆಂದು ಶಾಸ್ತ್ರಾಧಾರದಿಂದ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದ್ದವರಿಗೆ ಬಹಳ ಸಹಾಯಮಾಡಿದನು.


ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರ್ಯದಲ್ಲಿಯೂ ಮನಸ್ಸಾಕ್ಷಿಯು ತಪ್ಪು ತೋರಿಸುವದಿಲ್ಲ.


ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತನಂಬಿಕೆಯಿಲ್ಲದವನಾಗಲಿ ಈ ವರವಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,


ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು. ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಯಿತಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು