Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:11 - ಕನ್ನಡ ಸತ್ಯವೇದವು J.V. (BSI)

11 ಅಂಥವನು ಸನ್ಮಾರ್ಗ ತಪ್ಪಿದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷಾಪಾತ್ರನೆಂದು ಅವನ ಮನಸ್ಸೇ ನಿರ್ಣಯಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಂಥವನು ಪತಿತ ಹಾಗೂ ಪಾಪಿಯೆಂದು ತಿಳಿ. ಅವನ ದುಷ್ಕೃತ್ಯಗಳೇ ಅವನ ಮೇಲೆ ತೀರ್ಪಿಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಂಥವನು ಕೆಟ್ಟವನೂ ಪಾಪಪೂರಿತನೂ ಆಗಿದ್ದಾನೆ ಎಂಬುದು ನಿನಗೂ ತಿಳಿದಿದೆ. ಅವನು ತನ್ನ ಸ್ವಕಾರ್ಯಗಳಿಂದಲೇ ತಪ್ಪಿತಸ್ಥನೆಂಬ ತೀರ್ಪನ್ನು ಹೊಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಂಥವರು ಸನ್ಮಾರ್ಗ ತಪ್ಪಿದವರೂ ತಮ್ಮನ್ನು ತಾವೇ ಖಂಡಿಸಿಕೊಳ್ಳುವವರಾಗಿ ಪಾಪಮಾಡುವವರೂ ಆಗಿದ್ದಾರೆಂದು ನಿಶ್ಚಯವಾಗಿ ತಿಳಿದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಸ್ಲಿ ಲೊಕಾ ಪೊಜ್ಡಿ ಮನ್ತಲೆ ತುಮ್ಕಾ ಗೊತ್ತ್ ಹಾಯ್ ಅನಿ ಅಪ್ನಿ ಕರ್‍ತಲ್ಯಾ ಪಾಪಾನಿ ತೆನಿ ಚುಕೆಚಿ ಮಾನ್ಸಾ ಮನುನ್ ದಾಕ್ವುನ್ ದಿತ್ಯಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:11
13 ತಿಳಿವುಗಳ ಹೋಲಿಕೆ  

ಯಾಕಂದರೆ ಸತ್ಯದ ಪರಿಜ್ಞಾನವನ್ನು ನಾವು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಇರುವದಿಲ್ಲ;


ಅದಾಗಿ ನಮ್ಮೊಳಗಿಂದ ಹೋದ ಕೆಲವರು ನಮ್ಮಿಂದ ಏನೂ ಅಪ್ಪಣೆಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬದನ್ನು ಕೇಳಿದ್ದರಿಂದ ನಾವು ಕೆಲವರನ್ನು ಆರಿಸಿಕೊಂಡು


ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು.


ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?


ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂ ಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಲ್ಲಿ ತಮ್ಮ ವಿಷಯವಾಗಿ ದೇವರ ಸಂಕಲ್ಪವನ್ನು ನಿರಾಕರಿಸಿದರು.


ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಕಾಗದವನ್ನು ಬರೆದನು, ಏನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು