Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:2 - ಕನ್ನಡ ಸತ್ಯವೇದವು J.V. (BSI)

2 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅವನು ಆಲಯದ ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಆ ಸಾಮಾಗ್ರಿಗಳನ್ನು ಅವನು ತನ್ನ ವಿಗ್ರಹಾಲಯದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:2
30 ತಿಳಿವುಗಳ ಹೋಲಿಕೆ  

ಅವನಿಗೆ ಬೇಡಿಹಾಕಿ ಯೆಹೋವನ ಆಲಯದ ಹಲವು ಸಾಮಾನುಗಳನ್ನು ಬಾಬೆಲಿಗೆ ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು. ಯೆಹೋಯಾಕೀಮನ ಉಳಿದ ಚರಿತ್ರೆಯೂ


ಅವನು ನನಗೆ - ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವದಕ್ಕಾಗಿ ಹೋಗುತ್ತಾರೆ; ಅದು ಸಿದ್ಧವಾದಾಗ ಆ ಸ್ವಂತ ಸ್ಥಳದಲ್ಲಿ ನಿಲ್ಲಿಸಲ್ಪಡುವಳು.


ಆತನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯರಾಜನಾದ ಯಾಬೀನನಿಗೆ ಮಾರಿಬಿಟ್ಟನು. ಮ್ಲೇಚ್ಫರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿಯಾಗಿದ್ದನು.


ಆದದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟನು. ಅವರು ಎಂಟು ವರುಷಗಳವರೆಗೆ ಅವನಿಗೆ ದಾಸರಾಗಿದ್ದರು.


ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿ ಬಿಟ್ಟನು; ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.


ಅವರ ಶರಣನು ಅವರನ್ನು ಶತ್ರುಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಮಂದಿ ಸೋತುಹೋಗುತ್ತಿದ್ದರೋ? ಯೆಹೋವನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತುಸಾವಿರ ಮಂದಿ ಓಡಿಹೋಗುತ್ತಿದ್ದರೋ?


ಅವರು ಪೂರ್ವದಿಕ್ಕಿಗೆ ಮುಂದೆ ಮುಂದೆ ಪ್ರಯಾಣ ಮಾಡುತ್ತಿರುವಾಗ ಶಿನಾರ್ ದೇಶದಲ್ಲಿ ಬೈಲುಸೀಮೆ ಸಿಕ್ಕಲು ಅಲ್ಲೇ ವಾಸಮಾಡಿಕೊಂಡು ತಮ್ಮ ತಮ್ಮೊಳಗೆ -


ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ತನ್ನ ಬಲೆಗೆ ಬಲಿಕೊಡುತ್ತಾನೆ, ತನ್ನ ಜಾಲಕ್ಕೆ ಧೂಪಹಾಕುತ್ತಾನೆ; ಅವುಗಳ ಮೂಲಕವೇ ಅವನ ಭೋಜನವು ಪುಷ್ಟಿ, ಅವನ ಆಹಾರವು ರುಚಿ.


ಅರಸೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಈ ರಾಜ್ಯಮಹತ್ವಮಾನ ಸನ್ಮಾನಗಳನ್ನು ದಯಪಾಲಿಸಿದನು;


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹ ಪ್ರವಾಹವಾಗಿ ಬಾಬೆಲಿಗೆ ಬರುತ್ತಿದ್ದ ಸಕಲದೇಶೀಯರು ಇನ್ನು ಮೇಲೆ ಬಾರರು; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವದು.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ನೆಬೂಕದ್ನೆಚ್ಚರನು ಯೆರೂಸಲೇವಿುನಿಂದ ಕೊಳ್ಳೆಯಾಗಿ ತಂದು ತನ್ನ ದೇವರ ಗುಡಿಯಲ್ಲಿಟ್ಟಿದ್ದ ಯೆಹೋವನ ಆಲಯದ ಸಾಮಾನುಗಳನ್ನು ಪಾರಸಿಯ ರಾಜನಾದ ಕೋರೆಷನು


ದಾಗೋನನ ಗುಡಿಗೆ ಒಯ್ದು ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು.


ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾವನಿಗೆ ವಿರುದ್ಧವಾಗಿ ನಾವು ದ್ರೋಹ ಮಾಡಿದೆವೋ ಆ ಯೆಹೋವನಲ್ಲವೇ. ಆತನ ಜನರು ಆತನ ಮಾರ್ಗಗಳಲ್ಲಿ ನಡೆಯಲೊಲ್ಲದೆ ಆತನ ಉಪದೇಶವನ್ನು ಕೇಳದೆ ಹೋದರಷ್ಟೆ.


ಅವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದನು; ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರುಷಗಳಾದನಂತರ ಅವನಿಗೆ ವಿರೋಧವಾಗಿ ತಿರುಗಿಬಿದ್ದನು.


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು


ಇದಲ್ಲದೆ ನಾನು ಯಾಜಕರಿಗೂ ಈ ಸಕಲ ಜನರಿಗೂ ಹೀಗೆ ನುಡಿದೆನು - ಯೆಹೋವನು ಇಂತೆನ್ನುತ್ತಾನೆ - ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು ಎಂಬದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬೆಲಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರುಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.


ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ - ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇವಿುಗೆ ಹೋಗೋಣ ಬನ್ನಿ ಅಂದುಕೊಂಡು ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದೇವೆ ಎಂದು ಹೇಳಿದರು.


ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಆಗ ದಾನಿಯೇಲನನ್ನು ಸನ್ನಿಧಿಗೆ ಬರಮಾಡಲು ರಾಜನು ಅವನಿಗೆ - ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲೆಂಬವನು ನೀನೋ?


ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು